ADVERTISEMENT

ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಮುಂದುವರಿದ ಮಳೆ ಆರ್ಭಟ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2022, 4:53 IST
Last Updated 6 ಸೆಪ್ಟೆಂಬರ್ 2022, 4:53 IST

ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನ ಜಾವದವರೆಗೂ ಚಿಕ್ಕಬಳ್ಳಾಪುರ ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಭಾರಿ ಮಳೆ ಸುರಿಯಿತು.

ಸೋಮವಾರ ರಾತ್ರಿ 7.30ರಿಂದ ಮತ್ತೆ ಮಳೆ ಆರಂಭವಾಯಿತು. ರಾತ್ರಿಯವರೆಗೂ ಉತ್ತಮ ಮಳೆ ಸುರಿಯಿತು.

ಜಿಲ್ಲೆಯ ಪ್ರಮುಖ ಕೆರೆಗಳಲ್ಲಿ ಒಂದಾದ ಚಿಕ್ಕಬಳ್ಳಾಪುರದ ಅಮಾನಿ ಗೋಪಾಲಕೃಷ್ಣಕೆರೆ ತುಂಬಿ ಕೋಡಿ ಹರಿಯುತ್ತಿದೆ. ಕೋಡಿ ನೀರು ಹರಿಯುತ್ತಿರುವ ಸುತ್ತಲಿನ ಹೊಲಗಳು ಜಲಾವೃತವಾಗಿವೆ.

ADVERTISEMENT

ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಕೆರೆ, ಕಟ್ಟೆಗಳು, ಚೆಕ್‌ಡ್ಯಾಂಗಳು ತುಂಬಿವೆ. ಯಾವ ಹಳ್ಳಿಗಳಲ್ಲಿ ನೋಡಿದರೂ ನೀರು ತುಂಬಿ ತುಳುಕುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.