ADVERTISEMENT

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಳೆಯ ಆರ್ಭಟ, ಉಕ್ಕಿದ ಉತ್ತರ ಪಿನಾಕಿನಿ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 3:13 IST
Last Updated 10 ಅಕ್ಟೋಬರ್ 2021, 3:13 IST
ಬಾಗೇಪಲ್ಲಿ ತಾಲ್ಲೂಕಿನ ದೇವಿಕುಂಟೆ ಗ್ರಾಮದ ರಸ್ತೆಯಲ್ಲಿನ ಮೇಲುಸೇತುವೆ ಕುಸಿತಗೊಂಡಿದ್ದರಿಂದ ಕೆಎಸ್‌ಆರ್‌ಟಿಸಿ ಬಸ್ ಮೇಲುಸೇತುವೆಯಲ್ಲಿ ಸಿಲುಕಿಕೊಂಡಿತ್ತು
ಬಾಗೇಪಲ್ಲಿ ತಾಲ್ಲೂಕಿನ ದೇವಿಕುಂಟೆ ಗ್ರಾಮದ ರಸ್ತೆಯಲ್ಲಿನ ಮೇಲುಸೇತುವೆ ಕುಸಿತಗೊಂಡಿದ್ದರಿಂದ ಕೆಎಸ್‌ಆರ್‌ಟಿಸಿ ಬಸ್ ಮೇಲುಸೇತುವೆಯಲ್ಲಿ ಸಿಲುಕಿಕೊಂಡಿತ್ತು   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಶನಿವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಧಾರಾಕಾರವಾಗಿ ಸುರಿಯಿತು. ಜಿಲ್ಲೆಯ ಉತ್ತರ ಪಿನಾಕಿನಿ ನದಿ, ಜಕ್ಕಲಮಡುಗು ಜಲಾಶಯ, ಶ್ರೀನಿವಾಸಸಾಗರ, ಅಮಾನಿಬೈರ ಸಾಗರ ಕೆರೆ ಸೇರಿದಂತೆ ದೊಡ್ಡ ಕೆರೆಗಳು ಭರ್ತಿಯಾಗಿವೆ.

ಬಾಗೇಪಲ್ಲಿ ತಾಲ್ಲೂಕಿನ ಮಾಡಪ್ಪಲ್ಲಿ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಯಾವುದೇ ಅಪಾಯವಾಗಿಲ್ಲ. ಬಾಗೇಪಲ್ಲಿ ತಾಲ್ಲೂಕು ದೇವಿಕುಂಟೆ ಬಳಿ ರಸ್ತೆ ಬದಿಯ ಮೋರಿ ಕುಸಿದಿದ್ದು ಕೆಎಸ್‌ಆರ್‌ಟಿಸಿ ಬಸ್ ಆ ಮೋರಿಯಲ್ಲಿ ಸಿಲುಕಿ ಹಾಕಿಕೊಂಡಿತ್ತು. ಶಿಡ್ಲಘಟ್ಟದಲ್ಲಿ ತಾಲ್ಲೂಕು ಕಚೇರಿ ಮತ್ತು ಆವರಣ ನೀರಿನಿಂದ ಸೋರಿದ ಪರಿಣಾಮ ಕೆಲಸ ಕಾರ್ಯಗಳು ಸ್ಥಗಿತವಾಗಿದ್ದವು.

ಚಿಂತಾಮಣಿ ಸೇರಿದಂತೆ ಬಹಳಷ್ಟು ಕಡೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದೆ.ಗೌರಿಬಿದನೂರು ತಾಲ್ಲೂಕಿನ ರಮಾಪುರದಲ್ಲಿ ಮಳೆಯ ಪರಿಣಾಮವಾಗಿ ಮರಗಳು ನೆಲಕ್ಕುರುಳಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.