ADVERTISEMENT

ಮನೆ ಕುಸಿತ: ಕುಟುಂಬಕ್ಕೆ ₹10 ಲಕ್ಷ ಪರಿಹಾರ ವಿತರಣೆ

​ಪ್ರಜಾವಾಣಿ ವಾರ್ತೆ
Published 14 ಜನವರಿ 2021, 2:19 IST
Last Updated 14 ಜನವರಿ 2021, 2:19 IST
ಚಿಂತಾಮಣಿಯಲ್ಲಿ ಶಾಸಕ ಎಂ.ಕೃಷ್ಣಾರೆಡ್ಡಿ ಸಂತ್ರಸ್ತ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದರು
ಚಿಂತಾಮಣಿಯಲ್ಲಿ ಶಾಸಕ ಎಂ.ಕೃಷ್ಣಾರೆಡ್ಡಿ ಸಂತ್ರಸ್ತ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದರು   

ಚಿಂತಾಮಣಿ: ತಾಲ್ಲೂಕಿನ ವೈಜಕೂರು ಗ್ರಾಮದಲ್ಲಿ ಜಡಿ ಮಳೆಗೆ ಮನೆ ಕುಸಿದು, ತಂದೆ ಮತ್ತು ಮಗ ಮೃತಪಟ್ಟಿದ್ದ ಕುಟುಂಬಕ್ಕೆ ಬುಧವಾರ ಶಾಸಕ ಎಂ.ಕೃಷ್ಣಾರೆಡ್ಡಿ ₹10 ಲಕ್ಷದ ಪರಿಹಾರದ ಚೆಕ್ ವಿತರಿಸಿದರು.

ಗ್ರಾಮದಲ್ಲಿ ಅ.23ರಂದು ಜಡಿಮಳೆಯಿಂದಾಗಿ ನಸುಕಿನಲ್ಲಿ ಮನೆಯ ಚಾವಣಿ ಕುಸಿದುಬಿದ್ದು ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದರು. ಪತ್ನಿ ಮತ್ತು ಮಗಳು ಗಾಯಗೊಂಡಿದ್ದರು. ಶಾಸಕ ಎಂ.ಕೃಷ್ಣಾರೆಡ್ಡಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟವರಿಗೆ ಸರ್ಕಾರದಿಂದ ತಲಾ ₹5 ಲಕ್ಷ ಹಾಗೂ ವೈಯಕ್ತಿಕವಾಗಿ ತಲಾ ₹50 ಸಾವಿರ ನೀಡುವುದಾಗಿ ಭರವಸೆ ನೀಡಿದ್ದರು.

ಅವರ ಸೂಚನೆಯಂತೆ ಅಧಿಕಾರಿಗಳು ಪರಿಹಾರಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಸರ್ಕಾರ ತಲಾ ₹5 ಲಕ್ಷ ಪರಿಹಾರ ಮಂಜೂರು ಮಾಡಿತ್ತು. ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಮೃತರ ಪತ್ನಿ ಮುನಿರಾಜಮ್ಮ ಅವರಿಗೆ ಸರ್ಕಾರದ ₹10 ಲಕ್ಷ ಹಾಗೂ ವೈಯಕ್ತಿಕ ₹1 ಲಕ್ಷ ಮೊತ್ತದ ಚೆಕ್‌ಗಳನ್ನು ಶಾಸಕರು ವಿತರಿಸಿದರು.

ADVERTISEMENT

‘ಗ್ರಾಮ ಪಂಚಾಯಿತಿಯಿಂದ ಮನೆಯನ್ನು ಕಟ್ಟಿಸಿಕೊಡಲಾಗುವುದು. ಮನೆಯಲ್ಲಿದ್ದ ಗಾಯಾಳುಗಳು ಚಿಕಿತ್ಸೆ ಪಡೆದು ಚೇತರಿಸಿಕೊಂಡು ಬಂದಿದ್ದು ತಡವಾಯಿತು. ಅಷ್ಟರಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಂದಿದ್ದರಿಂದ ಸ್ವಲ್ಪ ತಡವಾಗಿದೆ. ಅವರಿಗೆ ಮೊದಲಿನಂತೆ
ಮನೆಯನ್ನು ನಿರ್ಮಿಸಿಕೊಡಲಾಗುವುದು’ ಎಂದರು.
ತಹಶೀಲ್ದಾರ್ ಹನುಮಂತರಾಯಪ್ಪ, ಜೆ.ಡಿ.ಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.