ಚಿಕ್ಕಬಳ್ಳಾಪುರ: ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಯೋಜನೆಗಳ ಕಾಮಗಾರಿಗಳ ತ್ವರಿತ ಅನುಷ್ಠಾನದ ಬಗ್ಗೆ ಶಾಸಕ ಎನ್.ಹೆಚ್.ಶಿವಶಂಕರರೆಡ್ಡಿ ಅವರು ಶನಿವಾರ ಜಿಲ್ಲಾಧಿಕಾರಿ ಆರ್.ಲತಾ ಅವರೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಶಿವಶಂಕರರೆಡ್ಡಿ ಅವರು, ‘ಎಚ್.ನರಸಿಂಹಯ್ಯ ವಿಜ್ಞಾನ ಕೇಂದ್ರದಲ್ಲಿ ಸಭಾಂಗಣ ಕಾಮಗಾರಿ ಪೂರ್ಣಗೊಳಿಸಬೇಕು. ತಾರಾಲಯ ಸ್ಥಾಪನೆಗೆ ಕ್ರಮಕೈಗೊಳ್ಳಬೇಕು. ಕುರೂಡಿ ಅರಣ್ಯ ಪ್ರದೇಶದಲ್ಲಿ ನೀರು ಸಂರಕ್ಷಣಾ ಯೋಜನೆಯನ್ನು ಜಾರಿಗೊಳಿಸಬೇಕು. ಮಿನಿ ವಿಧಾನಸೌಧ ಹಾಗೂ ಅಂಬೇಡ್ಕರ್ ಅಧ್ಯಯನ ಕೇಂದ್ರದ ಕಾಮಗಾರಿಗಳು ತ್ವರಿತವಾಗಿ ಅನುಷ್ಠಾನಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಗೌರಿಬಿದನೂರು ತಹಶೀಲ್ದಾರ್ ಶ್ರೀನಿವಾಸ್ ಸಭೆಯಲ್ಲಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.