ADVERTISEMENT

ಇಂದಿರಾ ಕ್ಯಾಂಟೀನ್‌ನಲ್ಲಿ ಶುಚಿತ್ವ ಕಾಪಾಡಲು ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2021, 5:17 IST
Last Updated 4 ಫೆಬ್ರುವರಿ 2021, 5:17 IST
ಗೌರಿಬಿದನೂರಿನಲ್ಲಿ ಇಂದಿರಾ ಕ್ಯಾಂಟೀನ್‌ಗೆ ನಗರಸಭೆ ಅಧ್ಯಕ್ಷೆ ಕೆ.ಎಂ‌.ಗಾಯತ್ರಿಬಸವರಾಜ್ ಭೇಟಿ ನೀಡಿ ಪರಿಶೀಲಿಸಿದರು
ಗೌರಿಬಿದನೂರಿನಲ್ಲಿ ಇಂದಿರಾ ಕ್ಯಾಂಟೀನ್‌ಗೆ ನಗರಸಭೆ ಅಧ್ಯಕ್ಷೆ ಕೆ.ಎಂ‌.ಗಾಯತ್ರಿಬಸವರಾಜ್ ಭೇಟಿ ನೀಡಿ ಪರಿಶೀಲಿಸಿದರು   

ಗೌರಿಬಿದನೂರು: ನಗರದ‌ ಬಿ.ಎಚ್.ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಬುಧವಾರ ಬೆಳಿಗ್ಗೆ ನಗರಸಭೆ ಅಧ್ಯಕ್ಷೆ ಕೆ.ಎಂ.ಗಾಯತ್ರಿ ಬಸವರಾಜ್ ಭೇಟಿ ನೀಡಿ ಅಲ್ಲಿನ ಶುಚಿತ್ವ ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು.

‘ಸಾರ್ವಜನಿಕರ ಅನುಕೂಲಕ್ಕಾಗಿ ‌ಮಾಡಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ನಿತ್ಯ ಗುಣಮಟ್ಟದ ‌ಮತ್ತು ಶುಚಿತ್ವವುಳ್ಳ ಆಹಾರವನ್ನು ‌ನೀಡಬೇಕಾಗಿದೆ. ಇದರಿಂದ ಜನರು ನೆಮ್ಮದಿಯಿಂದ ಕ್ಯಾಂಟೀನ್‌ಗೆ ಬಂದು ಆಹಾರ ಸೇವನೆ ಮಾಡಲು ಸಹಾಯವಾಗುತ್ತದೆ. ಜತೆಗೆ ನಗರಸಭೆಯ ಪೌರಕಾರ್ಮಿಕರು ಕ್ಯಾಂಟೀನ್‌ ಸುತ್ತಲಿನ ಪ್ರದೇಶವನ್ನು ಶುಚಿಗೊಳಿಸಲು ಮುಂದಾಗಬೇಕಾಗಿದೆ‌’ ಎಂದರು.

‘ಆಹಾರ ತಯಾರಿಕೆಗೂ ಮುನ್ನ ಪಾತ್ರೆಗಳನ್ನು ಸ್ವಚ್ಛವಾಗಿ ತೊಳೆದು ಶುಭ್ರಗೊಳಿಸುವ ಬಗ್ಗೆ ಇಲ್ಲಿನ ಸಿಬ್ಬಂದಿ ಕಾಳಜಿ ವಹಿಸಬೇಕಾಗಿದೆ. ಯಾವುದೇ ಕಾರಣಕ್ಕೂ ನಾಗರಿಕರಿಂದ ಇಲ್ಲಿನ ಆಹಾರದ ಗುಣಮಟ್ಟ ಹಾಗೂ ಶುಚಿತ್ವದ ಬಗ್ಗೆ ಯಾವುದೇ ದೂರುಗಳು‌ ಬರದಂತೆ ನೋಡಿಕೊಳ್ಳಬೇಕಾಗಿದೆ’ ಎಂದು ಹೇಳಿದರು. ಗಾಯತ್ರಿಯವರು ಕ್ಯಾಂಟೀನ್‌ನಲ್ಲಿಯೇ ಬೆಳಗಿನ ಉಪಾಹಾರ ಸೇವಿಸಿದರು.

ADVERTISEMENT

ನಗರಸಭೆಯ ಆರೋಗ್ಯ ನಿರೀಕ್ಷಕರಾದ ಸುರೇಶ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.