ADVERTISEMENT

ಗೌರಿಬಿದನೂರು: ಹೃದಯಾಘಾತದಿಂದ ಯೋಧ ಸಾವು

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 6:00 IST
Last Updated 8 ಜುಲೈ 2025, 6:00 IST
ಗಂಗಾಧರಪ್ಪ
ಗಂಗಾಧರಪ್ಪ   

ಗೌರಿಬಿದನೂರು: 30 ವರ್ಷಗಳಿಂದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಪಡೆಯಲ್ಲಿ ಯೋಧರಾಗಿದ್ದ ತೊಂಡೇಭಾವಿ ಗ್ರಾಮದ ಗಂಗಾಧರಪ್ಪ (54)  ಪಶ್ಚಿಮ ಬಂಗಾಳದಲ್ಲಿ ಶನಿವಾರ  ಕೆಲಸದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹುಟ್ಟೂರಾದ ತೊಂಡೇಭಾವಿ ಗ್ರಾಮದಲ್ಲಿ ಭಾನುವಾರ ಯೋಧನ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಯಿತು.

ಗಂಗಾಧರಪ್ಪ ಸಿಕ್ಕಿಂ, ಪಶ್ಚಿಮ ಬಂಗಾಳ ಸೇರಿದಂತೆ ದೇಶದ ಹಲವು ಕಡೆ ಕೆಲಸ ಮಾಡಿದ್ದಾರೆ. ಮೃತರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.