ನರಸಿಂಹ ಮೂರ್ತಿ
ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲ್ಲೂಕಿನ ಪತ್ರಕರ್ತ ಮಾಡಪ್ಪಲ್ಲಿ ನರಸಿಂಹ ಮೂರ್ತಿ ಅಪಘಾತದಿಂದ ಮೃತಪಟ್ಟಿದ್ದಾರೆ.
ಭಾನುವಾರ ಬೆಳಗಿನ ಜಾವ ತಮ್ಮ ಸ್ವಗ್ರಾಮ ಮಾಡಪ್ಪಲ್ಲಿಯಿಂದ ಬಾಗೇಪಲ್ಲಿಗೆ ಬೈಕ್ನಲ್ಲಿ ಬರುತ್ತಿದ್ದಾಗ ಪೋತೇಪಲ್ಲಿ ಕ್ರಾಸ್ ಬಳಿ ವಾಹನ ಡಿಕ್ಕಿಯಾಗಿದೆ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ನರಸಿಂಹಮೂರ್ತಿ ಈ ಹಿಂದೆ ಪ್ರಜಾವಾಣಿಯಲ್ಲಿ ಕೆಲಸ ಮಾಡಿದ್ದರು. ಸದ್ಯ ವಿಜಯ ಕರ್ನಾಟಕ ಬಾಗೇಪಲ್ಲಿ ತಾಲ್ಲೂಕು ವರದಿಗಾರರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.