ADVERTISEMENT

ಮಾ. 11ಕ್ಕೆ ಕಬಡ್ಡಿ ಪಂದ್ಯಾವಳಿ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 2:49 IST
Last Updated 14 ಫೆಬ್ರುವರಿ 2021, 2:49 IST
ಕರೇಕಲಹಳ್ಳಿಯಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಮುಖಂಡ ಶ್ರೀನಿವಾಸಗೌಡ
ಕರೇಕಲಹಳ್ಳಿಯಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಮುಖಂಡ ಶ್ರೀನಿವಾಸಗೌಡ   

ಚಿಂತಾಮಣಿ: ತಾಲ್ಲೂಕಿನ ಕಡದನಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕಾಲಮಡುಗು ಗ್ರಾಮದಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾರ್ಚ್‌ 11ರಂದು ರಾಜ್ಯಮಟ್ಟದ ಕಬಡ್ಡಿ ಟೂರ್ನಿ ಆಯೋಜಿಸಲಾಗಿದೆ.

ಪ್ರಥಮ ಬಹುಮಾನ ₹ 22,222, ದ್ವಿತೀಯ ಬಹುಮಾನ ₹ 11,111 ನೀಡಲಾಗುವುದು. ಆಸಕ್ತ ತಂಡಗಳು ಆ ದಿನ ಮಧ್ಯಾಹ್ನ 2 ಗಂಟೆಯ ಒಳಗೆ ಹೆಸರು ನೋಂದಾಯಿಸಿಕೊಳ್ಳಬೇಕು.

ಪ್ರತಿ ತಂಡಕ್ಕೂ ಪ್ರವೇಶ ಶುಲ್ಕ ₹ 999 ನಿಗದಿಪಡಿಸಲಾಗಿದೆ. ಪಂದ್ಯಗಳಲ್ಲಿ ಅಂಪೈರ್ ತೀರ್ಮಾನವೇ ಅಂತಿಮವಾದುದು. ಪಂದ್ಯದಲ್ಲಿ ಗಲಾಟೆಯಾದಲ್ಲಿ ಸಂಬಂಧಿಸಿದ 2 ತಂಡಗಳನ್ನು ವಜಾಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ಪ್ರವೇಶ ಶುಲ್ಕ ವಾಪಸ್ ನೀಡುವುದಿಲ್ಲ. ಒಂದು ತಂಡದಲ್ಲಿ ಆಡಿದ ಆಟಗಾರರು ಮತ್ತೊಂದು ತಂಡದಲ್ಲಿ ಆಡಲು ಅವಕಾಶವಿಲ್ಲ. ತಂಡದ ಎಲ್ಲ ಸದಸ್ಯರು ಆಧಾರ್ ಕಾರ್ಡ್‌ನ ಜೆರಾಕ್ಸ್ ಪ್ರತಿ ನೀಡಬೇಕು.

ADVERTISEMENT

ಹೆಚ್ಚಿನ ಮಾಹಿತಿಗೆ ಮೊಬೈಲ್90365 90171 ಅಥವಾ 96113 72839 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.