ಚಿಕ್ಕಬಳ್ಳಾಪುರ: ನಗರದ ದೊಡ್ಡಭಜನೆ ರಸ್ತೆಯ ಕನಕ ಲಕ್ಷ್ಮಿನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ ಭಾನುವಾರ ಸಂಭ್ರಮದಿಂದ ನೆರವೇರಿತು.
ಬೆಳಿಗ್ಗೆ 5.30ಕ್ಕೆ ಸುಪ್ರಭಾತ, 6.30ಕ್ಕೆ ಪಂಚಾಮೃತ ಅಭಿಷೇಕ, 8.30ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 12ಕ್ಕೆ ಮಹಾಪ್ರಸಾದ ನಡೆಯಿತು. ಸಂಜೆ 5ಕ್ಕೆ ಲೋಕ ಕಲ್ಯಾಣಾರ್ಥ ಸ್ವಾಮಿ ಅವರ ತಿರುಕಲ್ಯಾಣೋತ್ಸವ ನಡೆಯಿತು.ನಗರದ ವಿವಿಧ ಭಾಗಗಳ ಭಕ್ತರು ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡಿದ್ದರು. ಜನರು ಕೋವಿಡ್ ಮಾರ್ಗಸೂಚಿ ಅನ್ವಯ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.