ಶಿಡ್ಲಘಟ್ಟ: ‘ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಿಟ್ಟುಕೊಡಲು ಎಬಿಡಿ ಟ್ರಸ್ಟ್ನ ರಾಜೀವ್ಗೌಡ ಅವರ ಕಡೆಯವರು ನನಗೆ ₹30 ಕೋಟಿ ಆಮಿಷವೊಡ್ಡಿದರು’ ಎಂದು ಹಾಲಿ ಶಾಸಕ ವಿ. ಮುನಿಯಪ್ಪ ಗಂಭೀರ ಆರೋಪ ಮಾಡಿದ್ದಾರೆ.
ವಿ.ಮುನಿಯಪ್ಪ ಅವರ ಈ ಹೇಳಿಕೆಯು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ವಿ. ಮುನಿಯಪ್ಪ ಅವರು ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ.
ಶಾಸಕ ವಿ. ಮುನಿಯಪ್ಪ ಅವರು ಈ ಕ್ಷೇತ್ರವನ್ನು ಆರು ಬಾರಿ ಪ್ರತಿನಿಧಿಸಿದ್ದು, ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದಾರೆ.ಆದರೆ ಇತ್ತೀಚೆಗೆ ಎಬಿಡಿ ಟ್ರಸ್ಟ್ನ ಅಧ್ಯಕ್ಷ ರಾಜೀವ್ಗೌಡ, ಎಸ್ಎನ್ ಕ್ರಿಯಾ ಟ್ರಸ್ಟ್ನ ಅಧ್ಯಕ್ಷ ಪುಟ್ಟು ಆಂಜಿನಪ್ಪ ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಸಮಾಜ ಸೇವೆ ಮೂಲಕ ಕ್ಷೇತ್ರದಲ್ಲಿ ಗುರುತಿಸಿಕೊಳ್ಳತೊಡಗಿದ್ದಾರೆ. ಈ ಮೂವರಲ್ಲಿ ಪಕ್ಷದ ‘ಬಿ’ಫಾರಂಯಾರಿಗೆ ಸಿಗುತ್ತದೆ ಎಂಬುದು ಗೊತ್ತಿಲ್ಲ. ಇದರಿಂದಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ.
‘ಕೊರೊನಾ ಸಮಯದಲ್ಲಿ ಸಮಾಜ ಸೇವೆ ಮಾಡುವ ನೆಪದಲ್ಲಿ ಕ್ಷೇತ್ರಕ್ಕೆ ದಿಢೀರ್ ಎಂದು ಬಂದ ರಾಜೀವ್ ಗೌಡ ಅವರು ಜನರಿಗೆ ₹500 ಮತ್ತು ₹1,000 ಕೊಟ್ಟಿದ್ದಾರೆ. ಅವರು ಕೊಟ್ಟಿದ್ದ ₹2,000 ಮೌಲ್ಯದ ಚೆಕ್ಗಳು ಬೌನ್ಸ್ಆಗಿವೆಎನ್ನಲಾಗಿದೆ. ರಾಜೀವ್ ವಿರುದ್ಧ ಮೂರು ಎಫ್ಐಆರ್ ದಾಖಲಾಗಿವೆ. ಈ ಕುರಿತು ನಾನು ಕೆಪಿಸಿಸಿಗೂ ದೂರು ಕೊಟ್ಟಿದ್ದೇನೆ’ ಎಂದು ವಿ. ಮುನಿಯಪ್ಪ ಅವರು ಹೇಳಿದ್ದಾರೆ.
ಅದ್ಯಾರೋ ಪುಟ್ಟು ಅಂತೆ ಅವರು ಏನೋನೋ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಪುಟ್ಟು ಅಂಜಿನಪ್ಪ ವಿರುದ್ಧವೂ ಪ್ರಸ್ತಾಪ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.