ಚಿಕ್ಕಬಳ್ಳಾಪುರ: ‘ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿ ಎಲ್ಲಿಯೂ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರು ಹೆಸರು ಪ್ರಸ್ತಾಪಕ್ಕೆ ಬಂದಿಲ್ಲ. ಅದನ್ನು ಅವರಷ್ಟಕ್ಕೆ ಅವರೇ ಹೇಳಿಕೊಳ್ಳುತ್ತಿದ್ದಾರೆ’ ಎಂದು ಶಾಸಕ ವಿ.ಮುನಿಯಪ್ಪ ಟೀಕಿಸಿದರು.
ಶಿಡ್ಲಘಟ್ಟದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆ.ಎಚ್.ಮುನಿಯಪ್ಪ ಇನ್ನೂ ಆ ಮಟ್ಟಕ್ಕೆ ಬೆಳೆದಿಲ್ಲ. ಹಾಗೇನಾದರೂ ಅಂದುಕೊಳ್ಳುವಂತಿದ್ದರೆ ಅವರಷ್ಟಕ್ಕೆ ಅವರೇ ಹೇಳಿಕೊಳ್ಳಬೇಕು. ಹೈಕಮಾಂಡ್ ಮಟ್ಟದಲ್ಲಿ ಆಗಲಿ, ರಾಜ್ಯ ಮಟ್ಟದಲ್ಲಿ ಆಗಲಿ ಅವರು ಹೆಸರು ಪ್ರಸ್ತಾಪವೇ ಆಗಿಲ್ಲ. ಅವರಷ್ಟಕ್ಕೆ ಅವರೇ ಆಕಾಂಕ್ಷಿ ಎಂದು ಹೇಳಿಕೊಳ್ಳುತ್ತಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಸಿದ್ದರಾಮಯ್ಯ ಅವರ ವರ್ಚಸ್ಸು ಕುಗ್ಗಿದೆಯೇ’ ಎಂಬ ಪ್ರಶ್ನೆಗೆ, ‘ಹಾಗೇನು ಇಲ್ಲ. ಕೆಲವೊಮ್ಮೆ ನಮ್ಮಲ್ಲಿ ಹಾಗೇ ಕಾಣುತ್ತದೆ. ಶೀಘ್ರದಲ್ಲಿಯೇ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಹೋಗುತ್ತದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.