ADVERTISEMENT

ಜನರಿಗಾಗಿ ಹೋರಾಡಿದ ಕಿತ್ತೂರು ಚನ್ನಮ್ಮ: ಕೃಷ್ಣಪ್ಪ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2021, 4:28 IST
Last Updated 24 ಅಕ್ಟೋಬರ್ 2021, 4:28 IST
ಚಿಕ್ಕಬಳ್ಳಾಪುರದಲ್ಲಿ ನಡೆದ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯಲ್ಲಿ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಜಿಲ್ಲಾ ಸಂಘಟಕ ಭಾಸ್ಕರ್, ಕಾರ್ಯದರ್ಶಿ ವಿಜಯ್ ಕುಮಾರ್, ನಿರ್ದೇಶಕರಾದ ಮೋಹನ್, ಪರಮಶಿವಯ್ಯ, ಪದಾಧಿಕಾರಿಗಳಾದ ಗಿರೀಶ್, ಮಂಜುಳಾ ಗಿರೀಶ್, ಮಂಜುಳಾ ಗುಪ್ತಶೆಟ್ಟಿ, ಉಮಾ ರಾಜಣ್ಣ, ಬಿ. ಸಿದ್ದಪ್ಪ ಇದ್ದರು
ಚಿಕ್ಕಬಳ್ಳಾಪುರದಲ್ಲಿ ನಡೆದ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯಲ್ಲಿ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಜಿಲ್ಲಾ ಸಂಘಟಕ ಭಾಸ್ಕರ್, ಕಾರ್ಯದರ್ಶಿ ವಿಜಯ್ ಕುಮಾರ್, ನಿರ್ದೇಶಕರಾದ ಮೋಹನ್, ಪರಮಶಿವಯ್ಯ, ಪದಾಧಿಕಾರಿಗಳಾದ ಗಿರೀಶ್, ಮಂಜುಳಾ ಗಿರೀಶ್, ಮಂಜುಳಾ ಗುಪ್ತಶೆಟ್ಟಿ, ಉಮಾ ರಾಜಣ್ಣ, ಬಿ. ಸಿದ್ದಪ್ಪ ಇದ್ದರು   

ಚಿಕ್ಕಬಳ್ಳಾಪುರ: ಬ್ರಿಟಿಷರ ಅನ್ಯಾಯದ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ. ತನ್ನ ಮನೆತನಕ್ಕಾಗಿ ಹೋರಾಟ ಮಾಡದೆ ಜನರ ರಕ್ಷಣೆಗಾಗಿ, ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದರು ಎಂದು ಜಿಲ್ಲಾಧಿಕಾರಿ ಕಾರ್ಯಾಲಯದ ಕಚೇರಿ ಸಹಾಯಕ ಅಧಿಕಾರಿ ಕೃಷ್ಣಪ್ಪ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ವೀರಶೈವ ಮಹಿಳಾ ಸಮಾಜದ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯಕ್ಕೆ ಹೋರಾಡಿದ ಮಹಿಳೆಯರು ನಮಗೆ ಸ್ಫೂರ್ತಿ ಆಗಬೇಕು. ಚನ್ನಮ್ಮ ಅವರಂತೆ ಪ್ರತಿಯೊಬ್ಬರಲ್ಲಿ ದೇಶದ ಬಗ್ಗೆ ಗೌರವ ಬೆಳೆಯಬೇಕು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.