ಗೌರಿಬಿದನೂರು: ಲೋಕಸಭಾ ಚುನಾವಣೆಯ ಮತದಾನದ ದಿನದಂದು ತಾಲ್ಲೂಕಿನ ಎಲ್ಲಾ ಖಾಸಗಿ ಕಂಪನಿಗಳು ತಮ್ಮ ನೌಕರರಿಗೆ ವೇತನ ಸಹಿತ ರಜೆ ನೀಡಲು ಕಾರ್ಮಿಕ ಇಲಾಖೆ ಆದೇಶಿಸಿದೆ.
ನಗರದ ಕಾರ್ಮಿಕರ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಕಾರ್ಮಿಕ ನಿರೀಕ್ಷಕ ಟಿ. ಬಿ. ಸತೀಶ್ ಅವರು ಏ. 26ರಂದು ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕಾರ್ಮಿಕರು ಕಡ್ಡಾಯವಾಗಿ ಮತದಾನ ಮಾಡಬೇಕು. ಇದು ಅವರ ಹಕ್ಕು. ಈ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಖಾನೆಗಳು, ವಾಣಿಜ್ಯ ಸಂಸ್ಥೆಗಳು, ಅಂಗಡಿಗಳು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.