ADVERTISEMENT

ನಿವೇಶನ ಹಕ್ಕುಪತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 16:56 IST
Last Updated 3 ಜೂನ್ 2020, 16:56 IST
ಬಾಗೇಪಲ್ಲಿ ತಾಲ್ಲೂಕಿನ ತಿಮ್ಮಂಪಲ್ಲಿ ಗ್ರಾಮದಲ್ಲಿ ಅರ್ಹ ಫಲಾನುಭವಿಗಳಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನಿವೇಶನ ಹಕ್ಕು ಪತ್ರಗಳನ್ನು ವಿತರಿಸಿದರು.
ಬಾಗೇಪಲ್ಲಿ ತಾಲ್ಲೂಕಿನ ತಿಮ್ಮಂಪಲ್ಲಿ ಗ್ರಾಮದಲ್ಲಿ ಅರ್ಹ ಫಲಾನುಭವಿಗಳಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನಿವೇಶನ ಹಕ್ಕು ಪತ್ರಗಳನ್ನು ವಿತರಿಸಿದರು.   

ಬಾಗೇಪಲ್ಲಿ: ತಾಲ್ಲೂಕಿನಲ್ಲಿ ನಿವೇಶನ ರಹಿತರಿಗೆ ಪಕ್ಷಾತೀತವಾಗಿ ನಿವೇಶನ ಹಂಚಲಾಗಿದೆ ಎಂದು ಶಾಸಕ ಎಸ್‌.ಎನ್. ಸುಬ್ಬಾರೆಡ್ಡಿ ಹೇಳಿದರು.

ತಾಲ್ಲೂಕಿನ ತಿಮ್ಮಂಪಲ್ಲಿ ಮದಕವಾರಿಪಲ್ಲಿ ಗ್ರಾಮದ 40 ಮಂದಿಗೆ ಆಶ್ರಯ ಯೋಜನೆ ಅಡಿಯಲ್ಲಿ ನಿವೇಶನ ಹಕ್ಕು ಪತ್ರ ವಿತರಿಸಿ ಮಾತನಾಡಿದರು.

ಸರ್ಕಾರದ ಯೋಜನೆಗಳು ಇಂದಿಗೂ ಬಡವರಿಗೆ ಸಿಗುತ್ತಿಲ್ಲ. ಕೆಲವರಿಗೆ ನಿವೇಶನ, ಮನೆ ಇಲ್ಲದೇ ಗುಡಿಸಲುಗಳಲ್ಲಿ ವಾಸ ಮಾಡುತ್ತಿದ್ದಾರೆ. ತಾಲ್ಲೂಕಿನಲ್ಲಿ ಇದುವರಿಗೂ ಅರ್ಜಿ ಸಲ್ಲಿಸಿರುವ ಅರ್ಹ ನಿವೇಶನ ರಹಿತರಿಗೆ ನಿವೇಶನ, ಮನೆ ನಿರ್ಮಿಸುವುದಾಗಿ ತಿಳಿಸಿದರು.

ADVERTISEMENT

ತಾಲ್ಲೂಕಿನ ಬೊಮ್ಮಯ್ಯಗಾರಿಪಲ್ಲಿ ಗ್ರಾಮದ ಬಳಿ ₹ 76 ಲಕ್ಷದ ಕೆರೆ ಕಟ್ಟೆ ಕಾಮಗಾರಿಯನ್ನು ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ವೀಕ್ಷಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ನರಸಿಂಹಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥಸ್ವಾಮಿ, ಅಧ್ಯಕ್ಷ ಕೆ.ಆರ್.ನರೇಂದ್ರ ಬಾಬು, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ವಿ.ಮಂಜುನಾಥ್, ಕೆಡಿಪಿ ಸದಸ್ಯ ಅಮರನಾಥ ರೆಡ್ಡಿ, ಗ್ರಾಮದ ಮುಖಂಡ ವೆಂಕಟೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.