ಬಾಗೇಪಲ್ಲಿ: ಸಿಪಿಎಂ ರಾಜಕೀಯ ಸಮಾವೇಶಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಅಷ್ಟೇ ಅಲ್ಲದೆ ರಾಜ್ಯದ ವಿವಿಧ ಕಡೆಗಳಿಂದ ಸಿಪಿಎಂ ಕಾರ್ಯಕರ್ತರು ಮತ್ತು ಮುಖಂಡರು ಬಂದು ಸೇರಿದ್ದಾರೆ.
ಕಾರ್ಯಕ್ರಮ ನಡೆಯುವಕೆಎಚ್ಬಿ ಕಾಲೊನಿಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕ್ರಾಂತಿ ಗೀತೆಗಳು ಕಾರ್ಯಕ್ರಮಕ್ಕೆ ಮತ್ತಷ್ಟು ಹುರುಪು ನೀಡಿವೆ.
ಪಿಣರಾಯ್ ವಿಜಯನ್ಗೆ ಲಾಲ್ ಸಲಾಂ ಎಂದು ಘೋಷಣೆ ಕೂಗಿ ಸ್ವಾಗತ
ಬಾಗೇಪಲ್ಲಿ: ಸಿಪಿಎಂ ರಾಜಕೀಯ ಸಮಾವೇಶಕ್ಕೆ ಬಂದ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರಿಗೆ ಪಕ್ಷದ ಕಾರ್ಯಕರ್ತರು ಲಾಲ್ ಸಲಾಂ ಎಂದು ಘೋಷಣೆ ಕೂಗುವ ಮೂಲಕ ವೇದಿಕೆಗೆ ಸ್ವಾಗತಿಸಿದರು.
ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಪಿಣರಾಯ್ ವಿಜಯನ್ ಬರುತ್ತಿದ್ದಂತೆ ಕಾರ್ಯಕರ್ತರು ಮುಖಂಡರು ಎದ್ದು ನಿಂತು ಘೋಷಣೆಗಳನ್ನು ಕೂಗಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.