ADVERTISEMENT

ವಿಚಾರಣಾ ಕೈದಿಗಳಿಗೆ ಕಾನೂನು ಅರಿವು

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 5:45 IST
Last Updated 2 ನವೆಂಬರ್ 2021, 5:45 IST
ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಕೈದಿಗಳಿಗೆ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮನ್ನು ಜಿಲ್ಲಾ ಪಂಚಾಯಿತಿ ಸಿಇಒ ಪಿ.ಶಿವಶಂಕರ್ ಉದ್ಘಾಟಿಸಿದರು. ನ್ಯಾಯಾಧೀಶರಾದ ಲಕ್ಷ್ಮಿಕಾಂತ ಮಿಸ್ಕಿನ್, ಭಾನುಮತಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ಧನುರೇಣುಕಾ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ನಾಜಿಯಾ ಖಾತೂನ್ ಇದ್ದರು
ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಕೈದಿಗಳಿಗೆ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮನ್ನು ಜಿಲ್ಲಾ ಪಂಚಾಯಿತಿ ಸಿಇಒ ಪಿ.ಶಿವಶಂಕರ್ ಉದ್ಘಾಟಿಸಿದರು. ನ್ಯಾಯಾಧೀಶರಾದ ಲಕ್ಷ್ಮಿಕಾಂತ ಮಿಸ್ಕಿನ್, ಭಾನುಮತಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ಧನುರೇಣುಕಾ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ನಾಜಿಯಾ ಖಾತೂನ್ ಇದ್ದರು   

ಚಿಕ್ಕಬಳ್ಳಾಪುರ: ಕೈದಿಗಳು ಶಿಕ್ಷೆಯ ಅವಧಿ ಪೂರ್ಣಗೊಳಿಸಿ ಹೊರಗೆ ಬಂದಾಗ ಮನಸ್ಸು ಪರಿವರ್ತನೆ ಮಾಡಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬದುಕುಬೇಕು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಅವರು ತಿಳಿಸಿದರು.

ಕನ್ನಡ ರಾಜ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಜಿಲ್ಲಾ ಕಾರಾಗೃಹ, ಸುಧಾರಣೆ ಸೇವಾ ಇಲಾಖೆ ಮತ್ತು ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಸೋಮವಾರ ತಾಲ್ಲೂಕಿನ ಅಣಕನೂರು ಬಳಿಯ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಕೈದಿಗಳಿಗೆ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ ಪಡೆಯುವುದು ಪ್ರತಿಯೊಬ್ಬರ ಹಕ್ಕು. ವ್ಯಕ್ತಿ ಸ್ವಾತಂತ್ರ್ಯಕ್ಕೆ ಚ್ಯುತಿ ಬರಬಾರದು. ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷೆ ಅವಧಿಯಲ್ಲಿರುವ ತಾವು ಸೆರೆವಾಸದ ವೇಳೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಕಾರಾಗೃಹದಲ್ಲಿರುವ ಗ್ರಂಥಾಲಯದ ಪುಸ್ತಕಗಳನ್ನು ಓದಬೇಕು ಎಂದು ಸಲಹೆ ನೀಡಿದರು.

ADVERTISEMENT

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮಿಕಾಂತ್ ಜಾನಕಿರಾಮ್ ಮಿಸ್ಕಿನ್ ಅವರು ಮಾತನಾಡಿ, ಬಿ.ಆರ್‌.ಅಂಬೇಡ್ಕರ್ ಅವರ ಪ್ರಕಾರ ಶಿಕ್ಷಣವೇ ದೇಶದ ಅಭಿವೃದ್ಧಿಗೆ ಮೂಲವಾಗಿದೆ. ಪ್ರತಿಯೊಬ್ಬರನ್ನು ಉತ್ತಮ ನಾಗರಿಕರನ್ನಾಗಿ ಮಾಡುವುದೇ ಈ ಸಾಕ್ಷರತಾ ಕಾರ್ಯಕ್ರಮದ ಉದ್ದೇಶ. ಮನೆ ಬೆಳಗಲು ಹಣತೆ ಬೇಕು, ಮನ ಬೆಳೆಗಲು ಅಕ್ಷರ ಬೇಕು ಎಂದರು.

ನ್ಯಾಯಾಧೀಶರಾದ ಭಾನುಮತಿ ಮಾತನಾಡಿ, ಬಂಧಿತ ವ್ಯಕ್ತಿಗಳ ಬದಲಾವಣೆ ಮತ್ತು ಸುಧಾರಣೆ ತರುವ ನಿಟ್ಟಿನಲ್ಲಿ ಶಿಕ್ಷಣವನ್ನು ಕಲಿಸುವುದೇ ಇದರ ಉದ್ದೇಶವಾಗಿದೆ. ಪ್ರತಿಯೊಬ್ಬರಿಗೂ ಸಾಮಾನ್ಯ ಶಿಕ್ಷಣವಿದ್ದರೆ ಅಪರಾಧಗಳನ್ನು ತಡೆಯಬಹುದು ಎಂದು ತಿಳಿಸಿದರು.

ಡಿವೈಎಸ್ಪಿ ವಾಸುದೇವ್, ಜಿಲ್ಲಾ ಕಾರಾಗೃಹ ಅಧೀಕ್ಷಕ ಎಂ.ಜಯರಾಮಯ್ಯ, ಬ್ರಹ್ಮಾನಂದರೆಡ್ಡಿ, ಕಲಾವಿದರಾದ ವಿ.ನಂಜುಂಡಪ್ಪ, ಲೋಕ ಶಿಕ್ಷಣ ಸಮಿತಿಯ ಶಿವಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.