ಚಿಂತಾಮಣಿ: ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಆಶ್ರಯದಲ್ಲಿ ನ. 26ರಂದು ಮಧ್ಯಾಹ್ನ 2ಗಂಟೆಗೆ ಸಂವಿಧಾನ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಉಪನ್ಯಾಸಕ ಡಾ.ಎಂ.ಬಿ. ಮಂಜುನಾಥರೆಡ್ಡಿ ಅಧ್ಯಕ್ಷತೆವಹಿಸಲಿದ್ದಾರೆ.ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಎಚ್.ಎಸ್. ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಜೆ. ಶಿವಕುಮಾರ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ರೂಪಾ, ವಕೀಲರ ಸಂಘದ ಅಧ್ಯಕ್ಷ ಎಸ್. ರಾಜಾರಾಂ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.