ADVERTISEMENT

ಉರುಳಿಗೆ ಸಿಲುಕಿ ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 20 ಜೂನ್ 2020, 16:14 IST
Last Updated 20 ಜೂನ್ 2020, 16:14 IST
ಕಾರಳ್ಳಿ ಬಳಿ ಉರುಳಿಗೆ ಸಿಲುಕಿ ಮೃತಪಟ್ಟ ಚಿರತೆ.
ಕಾರಳ್ಳಿ ಬಳಿ ಉರುಳಿಗೆ ಸಿಲುಕಿ ಮೃತಪಟ್ಟ ಚಿರತೆ.   

ಚಿಕ್ಕಬಳ್ಳಾಪುರ: ತಾಲ್ಲೂಕಿನ ಕಾರಹಳ್ಳಿ ಬಳಿ ನಂದಿಬೆಟ್ಟದ ತಪ್ಪಲು ಪ್ರದೇಶದಲ್ಲಿ ಬೇಟೆಗಾರರು ಕಾಡುಹಂದಿಗೆ ಹಾಕಿದ್ದ ಉರುಳಿಗೆ ಸಿಲುಕಿ ಶುಕ್ರವಾರ ಚಿರತೆಯೊಂದು ಮೃತಪಟ್ಟಿದೆ.

‘ಸುಮಾರು ನಾಲ್ಕು ವರ್ಷ ಪ್ರಾಯದ ಗಂಡು ಚಿರತೆ ಕಾಡುಹಂದಿಗಾಗಿ ಹಾಕಿದ್ದ ಉರುಳಿಗೆ ಸಿಲುಕಿ ಮೃತಪಟ್ಟಿತ್ತು. ಮರಣೋತ್ತರ ಪರೀಕ್ಷೆ ನಡೆಸಿ, ಚಿರತೆ ಕಳೆಬರವನ್ನು ಸುಟ್ಟು ಹಾಕಲಾಗಿದೆ. ಆರೋಪಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ’ ಎಂದು ವಲಯ ಅರಣ್ಯ ಅಧಿಕಾರಿ ವಿಕ್ರಂ ರೆಡ್ಡಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT