ADVERTISEMENT

ಜನಪ್ರತಿನಿಧಿಗಳು, ನಟ-ನಟಿಯರು ಜನರಿಗೆ ಮಾದರಿಯಾಗಲಿ: ಸಚಿವ ಕೆ. ಸುಧಾಕರ್

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 7:52 IST
Last Updated 5 ಸೆಪ್ಟೆಂಬರ್ 2020, 7:52 IST
ಸಚಿವ ಡಾ. ಕೆ. ಸುಧಾಕರ್
ಸಚಿವ ಡಾ. ಕೆ. ಸುಧಾಕರ್   

ಗೌರಿಬಿದನೂರು: ಜನಪ್ರತಿನಿಧಿಗಳು, ನಟ-ನಟಿಯರು ಜನರಿಗೆ ಮಾದರಿಯಾಗಿರಬೇಕು. ಇವರನ್ನು ನೋಡಿ ಅನೇಕರು ಜೀವನದಲ್ಲಿ ಬದಲಾಗುತ್ತಾರೆ. ಆದರೆ, ನಾವೇ ಮಾದಕ ವಸ್ತುಗಳನ್ನು ಸೇವಿಸಿ ತಪ್ಪು ಸಂದೇಶ ಜನರಿಗೆ ಕೊಡಬಾರದು. ಇದರಿಂದ ಸಮಾಜದಲ್ಲಿ ಗಳಿಸಿದ ಹೆಸರು ಮಣ್ಣು ಪಾಲಾಗುತ್ತದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಗೌರಿಬಿದನೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ‘‌ರಾಜ್ಯದಲ್ಲಿ ಮಾದಕ ವಸ್ತುಗಳ ನಿಗ್ರಹಕ್ಕೆ ಕಠಿಣ ಕ್ರಮ ತಗೆದುಕೊಳ್ಳಲಾಗುವುದು. ಈಗಾಗಲೇ ಈ ಸಂಬಂಧ ಗೃಹ ಸಚಿವರ ಜತೆ ಮಾತನಾಡಿದ್ದೇನೆ. ಸರ್ಕಾರ ಈ ಚಟುವಟಿಕೆಗೆಳ ವಿರುದ್ಧ ಕ್ರಮ ಕೈಗೊಳ್ಳಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT