ಚಿಕ್ಕಬಳ್ಳಾಪುರ: ನಗರದ ಬಿ.ಬಿ.ರಸ್ತೆಯಲ್ಲಿರುವ ಬಾಲಾಜಿ ವೈನ್ ಶಾಪ್ ಮಳಿಗೆ ಗೋಡೆಗೆ ಮಂಗಳವಾರ ರಾತ್ರಿ ಕಿಂಡಿ ಕೊರೆದು ಮದ್ಯದ ಬಾಟಲಿಗಳನ್ನು ಕಳ್ಳತನ ಮಾಡಲಾಗಿದೆ.
ಬುಧವಾರ ಬೆಳಿಗ್ಗೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಪೊಲೀಸರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಕಳ್ಳತನವಾಗಿರುವ ಮಾಲಿನ ಲೆಕ್ಕ ಕಲೆಹಾಕುತ್ತಿದ್ದಾರೆ.
ಲಾಕ್ಡೌನ್ ಕಾರಣಕ್ಕೆ ಮದ್ಯ ಸಿಗದೆ ಮದ್ಯ ವ್ಯಸನಿಗಳು ಈ ಕೃತ್ಯ ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.