ADVERTISEMENT

ಕೆಆರ್‌ಐಡಿಎಲ್ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 4:25 IST
Last Updated 27 ಮಾರ್ಚ್ 2024, 4:25 IST
   

ಚಿಕ್ಕಬಳ್ಳಾಪುರ: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆ.ಆರ್.ಐ.ಡಿ.ಎಲ್) ಎಂಜಿನಿಯರ್ ಸದಾಶಿವಯ್ಯ ಅವರ ಕಚೇರಿ ಮತ್ತು ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ಕಚೇರಿ, ಯಲಹಂಕ ಬಾಡಿಗೆ ಮನೆ, ಮೈಸೂರಿನ ರಾಮಕೃಷ್ಣ ನಗರದ ಮನೆ, ಬಗಾದಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮನೆ, ಟಿ.ನರಸೀಪುರದ ಒಕ್ಕಲಿಗೆರೆಯಲ್ಲಿರುವ ಮನೆಯ ಮೇಲೆ ದಾಳಿ ನಡೆದಿದೆ.

ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ರಾಮ್ ಅರಸಿದ್ದಿ ಮತ್ತು ಡಿವೈಎಸ್ಪಿ ವಿರೇಂದ್ರ ಕುಮಾರ್,ಮೋಹನ್, ಶಿವಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.