ADVERTISEMENT

ಕೋತಿಗಳ ಸಾಮೂಹಿಕ ಹತ್ಯೆ: ವಿಷವುಣಿಸಿದ ಶಂಕೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2021, 1:35 IST
Last Updated 9 ಫೆಬ್ರುವರಿ 2021, 1:35 IST
ವಿಷ ಉಣಿಸಿ ಸಾಯಿಸಿ ಟ್ರಾಕ್ಟರ್ ನಲ್ಲಿ ಸಾಗಿಸುತ್ತಿದ್ದ ಕೋತಿಗಳು
ವಿಷ ಉಣಿಸಿ ಸಾಯಿಸಿ ಟ್ರಾಕ್ಟರ್ ನಲ್ಲಿ ಸಾಗಿಸುತ್ತಿದ್ದ ಕೋತಿಗಳು   

ಗೌರಿಬಿದನೂರು:ತಾಲ್ಲೂಕಿನ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ30 ಕೋತಿಗಳು ಸಾವನ್ನಪ್ಪಿವೆ. ಕೋತಿಗಳ ಕಾಟ ತಾಳಲಾರದೆ ಗ್ರಾಮಸ್ಥರು ಅವುಗಳಿಗೆ ವಿಷವುಣಿಸಿದ ಶಂಕೆ ವ್ಯಕ್ತವಾಗಿದೆ.

ಗ್ರಾಮದಲ್ಲಿ ಭಾನುವಾರ ಬೆಳಗ್ಗೆ 50ಕ್ಕೂ ಹೆಚ್ಚು ಕೋತಿಗಳನ್ನು ಹಿಡಿದು ಬೋನಿನಲ್ಲಿ ಬಂಧಿಸಿ ಇಡಲಾಗಿತ್ತು. ರಾತ್ರಿ ಬೋನಿನಲ್ಲಿದ್ದ ಕೆಲವು ಕೋತಿಗಳು ಏಕಾಏಕಿ ಅಸ್ವಸ್ಥಗೊಂಡು, ಮೂರ್ಛೆ ಹೋಗಿವೆ. ಆ ಪೈಕಿ 30ಕ್ಕೂ ಹೆಚ್ಚು ಕೋತಿಗಳು ಉಸಿರುಗಟ್ಟಿ ಸತ್ತು ಹೋಗಿವೆ.

ಸತ್ತ ಮತ್ತು ಬದುಕುಳಿದ ಕೋತಿಗಳನ್ನು ರಾತ್ರೋರಾತ್ರಿ ಟ್ರ್ಯಾಕ್ಟರ್‌ನಲ್ಲಿಗೌರಿಬಿದನೂರು ಪಟ್ಟಣದ ಕಲ್ಲೂಡಿ ರೈಲ್ವೆ ಹಳಿಯ ಬಳಿಸಾಗಿಸಲಾಗುತ್ತಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಹಿಂದೂ ಜಾಗರಣ ವೇದಿಕೆಯ (ಹಿಂಜಾವೆ) ಸದಸ್ಯರುಟ್ರ್ಯಾಕ್ಟರ್ ಹಾಗೂ ಚಾಲಕನನ್ನು ನಗರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ADVERTISEMENT

ಬದುಕುಳಿದ ಕೋತಿಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

ವಿಷ ಹಾಕಿದ ಶಂಕೆ: ಗ್ರಾಮದ ಮುಖಂಡರೊಬ್ಬರ ಅಣತಿಯಂತೆ ಕೋತಿಗಳಿಗೆ ವಿಷ ಹಾಕಿ ಕೊಲ್ಲಲಾಗಿದೆ. ಪ್ರಕರಣವನ್ನು ಮುಚ್ಚಿ ಹಾಕಲು ರಾತ್ರೋರಾತ್ರಿ ರೈಲ್ವೆ ಹಳಿಯ ಬಳಿ ಕೋತಿಗಳ ಶವ ಬಿಸಾಡಲು ಯತ್ನಿಸುವಾಗ ಸಿಕ್ಕಿ ಬಿದ್ದಿದ್ದಾರೆ ಎಂದು ಹಿಂಜಾವೆ ಸದಸ್ಯರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.