ಶಿಡ್ಲಘಟ್ಟ: ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ‘ನಮ್ಮೂರ ಭೂಮಿ ನಮಗಿರಲಿ, ಅನ್ಯರಿಗಲ್ಲ’ ಎಂಬ ಘೋಷಣೆಯಡಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ಜನರಿಗೆ ಮಾಹಿತಿ ನೀಡುವ ಆಂದೋಲನಕ್ಕೆ ಆನೂರಿನಲ್ಲಿ ಬುಧವಾರ ಚಾಲನೆ ನೀಡಿದರು.
ರೈತ ಮುಖಂಡ ಬೆಳ್ಳೂಟಿ ಮುನಿಕೆಂಪಣ್ಣ, ರೈತ ಮುಖಂಡ ಭಕ್ತರಹಳ್ಳಿ ಪ್ರತೀಶ್ ಮಾತನಾಡಿದರು.
ಆನೂರು ಗ್ರಾಮ ಪಂಚಾಯಿತಿ ಪಿಡಿಒ ಕಾತ್ಯಾಯಿನಿ, ರೈತ ಮುಖಂಡ ರಾದ ಸುರೇಶ್, ಶ್ರೀರಾಮಪ್ಪ, ಅಭಿ ಲಾಷ್, ಶಿವು, ದೇವರಾಜ್, ಶ್ರೀನಿವಾಸ್, ಬಿ.ಸಿ.ರಮೇಶ್, ಮುನಿಯಪ್ಪ, ನಾರಾಯಣಸ್ವಾಮಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.