ADVERTISEMENT

ಮತ್ತಷ್ಟು ಸಚಿವರು ನ್ಯಾಯಾಲಯದ ಮೊರೆ: ಸಚಿವ ಸುಧಾಕರ್

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2021, 6:58 IST
Last Updated 6 ಮಾರ್ಚ್ 2021, 6:58 IST
 ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್   

ಚಿಕ್ಕಬಳ್ಳಾಪುರ: ಮಾನಹಾನಿಕರ ವರದಿ ಪ್ರಕಟಿಸಬಾರದು ಎಂದು ಮತ್ತಷ್ಟು ಸಚಿವರು ಇಂಜಕ್ಷನ್ ಕೋರಿ ನ್ಯಾಯಾಲಯದ ಮೊರ ಹೋಗುವರು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಾವು ಬಿಜೆಪಿಯ ಪ್ರಮುಖರ ಗಮನಕ್ಕೆ ತಂದೆಯೇ ನ್ಯಾಯಾಲಯಕ್ಕೆ ಹೋಗಿದ್ದೇವೆ’ ಎಂದರು.

ಸಚಿವರು ನ್ಯಾಯಾಲಯದ ಮೊರೆ ಹೋಗಿರುವುದು ಪಕ್ಷಕ್ಕೆ ಮುಜುಗರ ತರುವ ವಿಷಯ ಎಂದಿರುವ ಕೇಂದ್ರ ಸಚಿವ ಸದಾನಂದಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರಿಗೆ ಮಾಹಿತಿಯ ಕೊರತೆ ಇದೆ ಎಂದು ಹೇಳಿದರು.

ADVERTISEMENT

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.