ಶಿಡ್ಲಘಟ್ಟ: ತಾಲ್ಲೂಕಿನ ಸುಂಡ್ರಹಳ್ಳಿ ಗ್ರಾಮದ ಬಳಿ ಇರುವ ಚೆಕ್ ಡ್ಯಾಂನಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ.
ಜಂಗಮಕೋಟೆ ಹೋಬಳಿಯ ತೊಟ್ಟಿಬಾವಿ ಗ್ರಾಮದ ಯುವಕ ಮಂಜುನಾಥ್(21)
ಮೃತಪಟ್ಟವರು.
ಈತ ಜಂಗಮಕೋಟೆ ಹೋಬಳಿಯ ತೊಟ್ಟಿಬಾವಿ ಗ್ರಾಮದ ವೆಂಕಟೇಶ್ ಅವರ ಪುತ್ರ. ಮೈಕ್ರೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಹೊರಹೋಗಿದ್ದ ಆತ ಎರಡು, ಮೂರು ದಿನವಾದರೂ ಮನೆಗೆ ಬಾರದ ಹಿನ್ನೆಲೆ ಗಾಬರಿಗೊಂಡ ಮನೆಯವರು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಮಂಜುನಾಥ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.