ADVERTISEMENT

ಸಂಚಾರ ಸ್ವಾಬ್ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2020, 5:05 IST
Last Updated 16 ನವೆಂಬರ್ 2020, 5:05 IST
ಶಿಡ್ಲಘಟ್ಟದ ಹೊಸಮನೆ ಬೀದಿಯಲ್ಲಿ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಯು ಸಾರ್ವಜನಿಕರ ಸ್ವಾಬ್ ಪರೀಕ್ಷೆ ನಡೆಸುತ್ತಿರುವುದನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಪರಿಶೀಲಿಸಿದರು
ಶಿಡ್ಲಘಟ್ಟದ ಹೊಸಮನೆ ಬೀದಿಯಲ್ಲಿ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಯು ಸಾರ್ವಜನಿಕರ ಸ್ವಾಬ್ ಪರೀಕ್ಷೆ ನಡೆಸುತ್ತಿರುವುದನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಪರಿಶೀಲಿಸಿದರು   

ಶಿಡ್ಲಘಟ್ಟ: ಕೊರೊನಾ ಸೋಂಕಿತರ ಸಂಖ್ಯೆ ತಾಲ್ಲೂಕಿನಲ್ಲಿ ಇಳಿಮುಖವಾಗಿದೆ. ಆದರೂ ಸೋಂಕಿತರ ಸರಪಳಿ ಬೆಳೆಯದಂತೆ ನೋಡಿಕೊಳ್ಳಲು ನಗರ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಖುದ್ದಾಗಿ ತೆರಳಿ ಸ್ವಾಬ್ ಪರೀಕ್ಷೆ ನಡೆಸುತ್ತಿದ್ದಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ತಿಳಿಸಿದರು.

ನಗರದ ಹೊಸಮನೆ ಬೀದಿಯಲ್ಲಿ ಭಾನುವಾರ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಯಿಂದ ಸಾರ್ವಜನಿಕರ ಸ್ವಾಬ್ ಪರೀಕ್ಷೆ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ಪರೀಕ್ಷಿಸಿದ ಅವರು ಸಾರ್ವಜನಿಕರಿಗೆ ಅರಿವು ಮೂಡಿಸುತ್ತಾ ಮಾತನಾಡಿದರು.

ಸಮುದಾಯದಲ್ಲಿ ಕೋವಿಡ್ ಸೋಂಕು ಹರಡದಂತೆ ಎಚ್ಚರವಹಿಸಲಾಗುತ್ತಿದೆ. ಅದಕ್ಕಾಗಿಯೇ ನಾವುಗಳೇ ಖುದ್ದಾಗಿ ತೆರಳಿ ಪರೀಕ್ಷೆ ನಡೆಸುತ್ತಿದ್ದೇವೆ. ಜನರು ಸಹಕಾರ ನೀಡಬೇಕು. ಯಾವುದೇ ರೀತಿಯ ಅನುಮಾನಗಳಿದ್ದರೂ ಪರಿಹರಿಸಿಕೊಳ್ಳಿ. ಸ್ವಾಬ್ ಪರೀಕ್ಷೆಗೆ ಒಳಪಡುವ ಮೂಲಕ ಸೋಂಕು ಇದೆಯೋ ಇಲ್ಲವೋ ಎಂಬುದನ್ನು ದೃಢಪಡಿಸಿಕೊಳ್ಳಬೇಕು. ಮಾಸ್ಕ್ ಧರಿಸುವುದು, ಅಂತರ ಕಾಪಾಡಿಕೊಳ್ಳುವುದು ಹಾಗೂ ಸ್ವಚ್ಛತೆ ರೂಢಿಸಿಕೊಳ್ಳುವುದು ಬಹಳ ಮುಖ್ಯ ಎಂದು ಹೇಳಿದರು.

ADVERTISEMENT

ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.