ಚಿಕ್ಕಬಳ್ಳಾಪುರ: ವಿದುರಾಶ್ವತ್ಥದ ಹುತಾತ್ಮರ ಸ್ಮಾರಕ ಹಾಗೂ ವೀರಸೌಧದ ಬಳಿಯ ಮರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಂಗಗಳಿದ್ದು ಇವುಗಳ ನಿಯಂತ್ರಣ ಅರಣ್ಯ ಇಲಾಖೆಗೆ ಸವಾಲಾಗಿದೆ.
ಈ ಎರಡು ಕಡೆಗಳಿಗೆ ಮುಖ್ಯಮಂತ್ರಿ ಮತ್ತು ರಾಜ್ಯಪಾಲರು ಭೇಟಿ ನೀಡಿ ಪುಷ್ಪ ನಮನ ಸಲ್ಲಿಸುವರು.
ಗಣ್ಯರು ಈ ಸ್ಥಳಕ್ಕೆ ಭೇಟಿ ನೀಡುವ ವೇಳೆ ಮಂಗಗಳನ್ನು ನಿಯಂತ್ರಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ.
ವ್ಯಕ್ತಿಯೊಬ್ಬರಿಗೆ ಮಂಗನ ವೇಷ ತೊಡಿಸಿ ಅವುಗಳನ್ನು ಅಲ್ಲಿಂದ ಚದುರುವಂತೆ ಮಾಡುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.