ADVERTISEMENT

ಕುಡಿದ ಮತ್ತಿನಲ್ಲಿ ಪತ್ನಿ ಕೊಲೆ  

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 8:16 IST
Last Updated 4 ಡಿಸೆಂಬರ್ 2020, 8:16 IST

ಗೌರಿಬಿದನೂರು: ಕುಡಿದ ಅಮಲಿನಲ್ಲಿದ್ದ ಪತಿ ತನ್ನ ಹೆಂಡತಿಯನ್ನು ಕೊಲೆ ಮಾಡಿ ಪರಾರಿಯಾದ ಘಟನೆ ತಾಲ್ಲೂಕಿನ ತೊಂಡೇಬಾವಿ ಹೋಬಳಿಯ ಕಾಮಲಾಪುರದಲ್ಲಿ ನಡೆದಿದೆ.

ಮಮತಾ ಮೃತಪಟ್ಟವರು. ಆರು ವರ್ಷಗಳ ಹಿಂದೆ ಶಿವಕುಮಾರ್ ಎಂಬಾತನೊಟ್ಟಿಗೆ ಆಕೆಯ ವಿವಾಹವಾಗಿದ್ದು, ಇಬ್ಬರು ಗಂಡು ಮಕ್ಕಳಿದ್ದಾರೆ. ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆಯಿದೆ.

ಯಾವುದೇ ಕೆಲಸಕ್ಕೆ ಹೋಗದ ಶಿವಕುಮಾರ್ ಕುಡಿತದ ಚಟಕ್ಕೆ ದಾಸನಾಗಿದ್ದ. ವಿನಾಕಾರಣ ನಿತ್ಯ ಹೆಂಡತಿಯ ಜತೆ ಜಗಳವಾಡುತ್ತಿದ್ದ. ಕಳೆದ ರಾತ್ರಿ ಇಬ್ಬರ ನಡುವೆ ಜಗಳ ನಡೆದಿದೆ. ಎಲ್ಲರೂ ಮಲಗಿದ್ದ ವೇಳೆ ಮಮತಾಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹಾಗೂ ಸಿಪಿಐ ಎಸ್. ರವಿ ಭೇಟಿ ನೀಡಿ ಪರಿಶೀಲಿಸಿದರು. ಆರೋಪಿಯ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.