ADVERTISEMENT

ಚಿಂತಾಮಣಿ: ಕಸದಲ್ಲಿ ಹೆಣ್ಣು ಶಿಶು ಪತ್ತೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 4:05 IST
Last Updated 22 ಅಕ್ಟೋಬರ್ 2021, 4:05 IST
ಚಿಂತಾಮಣಿ ತಾಲ್ಲೂಕಿನ ಅಂಬಾಜಿ ದುರ್ಗಾ ಹೋಬಳಿಯ ಉಪ್ಪರಪೇಟೆ ಗ್ರಾಮದ ಕಸದಲ್ಲಿ ದೊರಕಿದ್ದ ನವಜಾತ ಶಿಶು 
ಚಿಂತಾಮಣಿ ತಾಲ್ಲೂಕಿನ ಅಂಬಾಜಿ ದುರ್ಗಾ ಹೋಬಳಿಯ ಉಪ್ಪರಪೇಟೆ ಗ್ರಾಮದ ಕಸದಲ್ಲಿ ದೊರಕಿದ್ದ ನವಜಾತ ಶಿಶು    

ಚಿಂತಾಮಣಿ: ತಾಲ್ಲೂಕಿನ ಅಂಬಾಜಿದುರ್ಗಾ ಹೋಬಳಿಯ ಉಪ್ಪರಪೇಟೆ ಗ್ರಾಮದ ಕಸದಲ್ಲಿ ಬಿಸಾಕಿದ್ದ ನವಜಾತ ಹೆಣ್ಣು ಶಿಶುವನ್ನು ಗುರುವಾರ ಗ್ರಾಮಸ್ಥರು ರಕ್ಷಿಸಿ ಮಕ್ಕಳ ಕಲ್ಯಾಣ ಘಟಕಕ್ಕೆ ಒಪ್ಪಿಸಿದ್ದಾರೆ.

ಗ್ರಾಮದ ಬಸವೇಶ್ವರ ದೇವಾಲಯ ಪಕ್ಕದಲ್ಲಿ ನವಜಾತ ಶಿಶುವನ್ನು ಬಿಸಾಕಿ ಹೋಗಿದ್ದಾರೆ. ಇರುವೆಗಳು ಮಗುವನ್ನು ಕಚ್ಚ ತೊಡಗಿದಾಗ ಶಿಶು ಅಳತೊಡಗಿದೆ. ಅಳುವನ್ನು ಕೇಳಿಸಿಕೊಂಡ ಅಕ್ಕಪಕ್ಕದವರು ಜಮಾಯಿಸಿದಾಗ ಮಗು ಗೋಚರವಾಗಿದೆ. ಸಾಜೀದಾ ಮತ್ತು ಚಾನ್ ಎಂಬುವರು ಕೂಡಲೇ ಶಿಶುವನ್ನು ಮನೆಗೆ ತೆಗೆದುಕೊಂಡು ಸ್ನಾನ ಮಾಡಿಸಿ ರಕ್ಷಿಸಿದ್ದಾರೆ.

ಮಗುವನ್ನು ಸರ್ಕಾರಿ ಆಸ್ಪತ್ರೆಗೆ ತಂದು ದಾಖಲಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಸಾಂತ್ವನ ಕೇಂದ್ರಕ್ಕೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ADVERTISEMENT

ಮಕ್ಕಳ ತಜ್ಞೆ ಡಾ.ದಾಕ್ಷಾಯಿಣಿ ಚಿಕಿತ್ಸೆ ನೀಡಿದ್ದು, ಶಿಶು ಚೇತರಿಸಿಕೊಂಡು ಆರೋಗ್ಯವಾಗಿದೆ. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮತ್ತು ಸಾಂತ್ವನ ಕೇಂದ್ರದ ಸಿಬ್ಬಂದಿ ಆಗಮಿಸಿ ಮಗುವನ್ನು ಪಡೆದುಕೊಂಡಿದ್ದಾರೆ. ನಂತರ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಘಟಕಕ್ಕೆ ಒಪ್ಪಿಸಲಾಗಿದೆ.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಅಂಬಿಕಾ, ಮಕ್ಕಳ ಸಹಾಯವಾಣಿ ತಂಡದ ಸುನೀತಾ, ಶಾಲಿನಿ, ಸಾಂತ್ವನ ಕೇಂದ್ರದ ಕಾಮಾಕ್ಷಿ, ಯಶೋದಾ ಮಗುವನ್ನು ಸುರಕ್ಷಿತವಾಗಿ ಮಕ್ಕಳ ಕಲ್ಯಾಣ ಘಟಕಕ್ಕೆ
ಒಪ್ಪಿಸಿದ್ದಾರೆ.

‘ಈ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ಸಲ್ಲಿಸಲಾಗುವುದು. ಮಗುವಿನ ಪೋಷಕರಿಗಾಗಿ ಹುಡುಕಾಟ ನಡೆಸಲಾಗುವುದು. ಮಕ್ಕಳ ಕಲ್ಯಾಣ ಸಮಿತಿ ಮಂದೆ ಮಗುವನ್ನು ಹಾಜರುಪಡಿಸಿ ಇಲಾಖೆಯ ನಿಯಮಗಳಂತೆ ಮುಂದಿನ ಕ್ರಮಕೈಗೊಳ್ಳಲಾಗುವುದು’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.