ADVERTISEMENT

ಸಿಗದ ಕೂಲಿ: ನೇಣಿಗೆ ಶರಣು

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2020, 16:54 IST
Last Updated 30 ಮಾರ್ಚ್ 2020, 16:54 IST

ಚಿಂತಾಮಣಿ: ಲಾಕ್‌ಡೌನ್‌ನಿಂದ ಕೆಲಸ ಸಿಗುತ್ತಿಲ್ಲ ಎಂಬ ಕಾರಣಕ್ಕೆ ತಾಲ್ಲೂಕಿನ ದೊಡ್ಡಬೊಮ್ಮನಹಳ್ಳಿ ಕಾರ್ಮಿಕ ಮಂಜುನಾಥ್ (38) ಸೋಮವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಟ್ರಾಕ್ಟರ್ ಚಾಲನೆ, ಕೂಲಿ ನಾಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಕೆಲ ದಿನಗಳಿಂದ ಕೂಲಿ ಸಿಗದೆ ಜೀವನ ನಡೆಸುವುದೇ ದುಸ್ತರವಾಗಿತ್ತು. ಪತ್ನಿ ಹಾಗೂ ಇಬ್ಬರು ಮಕ್ಕಳ ಸಂಸಾರ ಸಾಗಿಸುವುದು ಕಷ್ಟವಾಗಿ ಜಿಗುಪ್ಸೆಗೊಂಡು ಮರಕ್ಕೆ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದರು.

ಕೆಲವರು ಬೇರೆಯವರು ನೀಡಿದ್ದನ್ನು ಪಡೆದು ತಿನ್ನುವುದು ಅವಮಾನ ಎಂದು ಭಾವಿಸುತ್ತಾರೆ ಎಂದು ಗ್ರಾಮದ ಮುಖಂಡ ವೆಂಕಟರೆಡ್ಡಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.