ಗೌರಿಬಿದನೂರು: ಅಶ್ವತ್ಥಯ್ಯ ಇಸ್ತೂರಿ ಸಂಜೀವಮ್ಮ ನ್ಯಾಷನಲ್ ಪದವಿ ಕಾಲೇಜು ವತಿಯಿಂದ ಎನ್ಎಸ್ಎಸ್ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಹೊಸೂರಿನ ಡಾ ಎಚ್.ಎನ್ ಪ್ರೌಢಶಾಲೆಯಲ್ಲಿ ಸೋಮವಾರ ನಡೆಯಿತು.
ಶಾಸಕ ಕೆ.ಎಚ್ ಪುಟ್ಟಸ್ವಾಮಿ ಗೌಡ ಮಾತನಾಡಿ, ವಿದ್ಯಾರ್ಥಿಗಳು ಕಲಿಕಾ ಹಂತದಿಂದಲೇ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ನ್ಯಾಷನಲ್ ವಿದ್ಯಾ ಸಂಸ್ಥೆಯ ಗೌರವಾಧ್ಯಕ್ಷ ಡಾ.ಎಚ್.ಎನ್ ಸುಬ್ರಹ್ಮಣ್ಯ, ತಹಶೀಲ್ದಾರ್ ಮಹೇಶ್ ಎಸ್.ಪತ್ರಿ, ವಿ.ವೆಂಕಟಶಿವಾರೆಡ್ಡಿ, ರವೀಂದ್ರ, ನಾಗರಾಜಪ್ಪ, ವೆಂಕಟಸ್ವಾಮಿ, ವೆಂಕಟೇಶ್, ಶೈಲಜಸಪ್ತಗಿರಿ, ಟಿ.ಜಯರಾಮ್, ಟಿ.ನಂಜುಂಡಪ್ಪ, ನೇತ್ರ, ಶ್ರೇಯಸ್, ಷರೀಫಾ ಬಾನು, ನಾಗರಾಜ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.