ADVERTISEMENT

ಚುನಾವಣೆಯ ಹಿನ್ನೆಲೆ ಪೊಲೀಸರ ಪಥಸಂಚಲನ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2023, 14:39 IST
Last Updated 22 ಏಪ್ರಿಲ್ 2023, 14:39 IST
ಬಾಗೇಪಲ್ಲಿ ಮುಖ್ಯರಸ್ತೆಯಲ್ಲಿ ಸರ್ಕಲ್‌ ಇನ್‌ಸ್ಪೆಕ್ಟರ್ ಡಿ.ಎಚ್.ಮುನಿಕೃಷ್ಣ ನೇತೃತ್ವದಲ್ಲಿ ಪೊಲೀಸರು, ಮಿಲಿಟರಿ ಪಡೆಯಿಂದ ಪಥಸಂಚಲನ ನಡೆಯಿತು
ಬಾಗೇಪಲ್ಲಿ ಮುಖ್ಯರಸ್ತೆಯಲ್ಲಿ ಸರ್ಕಲ್‌ ಇನ್‌ಸ್ಪೆಕ್ಟರ್ ಡಿ.ಎಚ್.ಮುನಿಕೃಷ್ಣ ನೇತೃತ್ವದಲ್ಲಿ ಪೊಲೀಸರು, ಮಿಲಿಟರಿ ಪಡೆಯಿಂದ ಪಥಸಂಚಲನ ನಡೆಯಿತು   

ಬಾಗೇಪಲ್ಲಿ: ಮೇ 10ರಂದು ನಡೆಯಲಿರುವ ವಿಧಾನಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಮತದಾನ ನಿರ್ಭೀತಿಯಿಂದ ಚಲಾಯಿಸುವಂತೆ ಪೊಲೀಸರು, ಪ್ಯಾರಾ ಮಿಲಿಟರಿ ಪಡೆ ಪಟ್ಟಣದ ಮುಖ್ಯರಸ್ತೆ ಸೇರಿದಂತೆ ವಿವಿಧ ಬೀದಿಗಳಲ್ಲಿ ಪಥಸಂಚಲನ ಮಾಡಿದರು.

ಪಟ್ಟಣದ ಸಿವಿಲ್ ನ್ಯಾಯಾಲಯದಿಂದ ಮುಖ್ಯರಸ್ತೆಯ ಮೂಲಕ, ಆವುಲಮಂದೆ, ದರ್ಗಾ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ಕಾಲೋನಿ, ವಾಲ್ಮೀಕಿ ಕಾಲೋನಿ, ನ್ಯಾಷನಲ್ ಕಾಲೇಜಿನವರಿಗೆ ಸರ್ಕಲ್ ಇನ್‌ಸ್ಪೆಕ್ಟರ್ ಡಿ.ಎಚ್.ಮುನಿಕೃಷ್ಣ ನೇತೃತ್ವದಲ್ಲಿ ಪೊಲೀಸರು ಹಾಗೂ ಪ್ಯಾರಾ ಮಿಲಿಟರಿ ಪಡೆ ಪಥಸಂಚಲನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT