ADVERTISEMENT

ಚಿಂತಾಮಣಿ: ಶಿಕ್ಷಕರ ಸಂಘದ ಚುನಾವಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 2:05 IST
Last Updated 29 ನವೆಂಬರ್ 2020, 2:05 IST

ಚಿಂತಾಮಣಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕಕ್ಕೆ ಡಿ. 6ರಂದು ಚುನಾವಣೆ ನಡೆಸಲು ಆದೇಶವಾಗಿದ್ದು ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿತ್ತು. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದರು.

ರಾಜ್ಯ ಚುನಾವಣಾಧಿಕಾರಿಯಿಂದ ಶನಿವಾರ ಬಂದ ಆದೇಶದಂತೆ ಚುನಾವಣಾ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೂ ಮುಂದೂಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಜಿ. ಸುರೇಶ್ ತಿಳಿಸಿದ್ದಾರೆ.

ಚುನಾವಣೆ ಮುಂದೂಡಿಕೆಗೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ ಎಂದು ಶಿಕ್ಷಕರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.