ADVERTISEMENT

ಲಾಭದಾಯಕ ಬೆಲೆ ಘೋಷಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2021, 4:19 IST
Last Updated 9 ಸೆಪ್ಟೆಂಬರ್ 2021, 4:19 IST
ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿ ಕಚೇರಿ ಎದುರು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಸದಸ್ಯರು ಧರಣಿ ನಡೆಸಿದರು
ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿ ಕಚೇರಿ ಎದುರು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಸದಸ್ಯರು ಧರಣಿ ನಡೆಸಿದರು   

ಚಿಕ್ಕಬಳ್ಳಾಪುರ: ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಆಗ್ರಹಿಸಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಸದಸ್ಯರು ಧರಣಿ ನಡೆಸಿದರು.

ಸಂಘಟನೆ ರಾಜ್ಯ ಸಮಿತಿ ಸದಸ್ಯ ನಾರಾಯಣ ರೆಡ್ಡಿ ಮಾತನಾಡಿ, ಹರಿಯಾಣದಲ್ಲಿ ಆಗಸ್ಟ್ 7 ಮತ್ತು 8ರಂದು ನಡೆದ ಸಂಘಟನೆಯ ರಾಷ್ಟ್ರೀಯ ಮಟ್ಟದ ಸಭೆಯಲ್ಲಿ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಸಂಬಂಧ ಚರ್ಚಿಸಲಾಯಿತು. ರೈತರು ಗೌರವಯುತ ಜೀವನ ನಡೆಸಬೇಕಾದರೆ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ನೀಡಬೇಕು. ಈ ಹಿನ್ನೆಲೆಯಲ್ಲಿ ದೇಶದ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಧರಣಿ ನಡೆಸಲಾಗುತ್ತಿದೆ ಎಂದು ಹೇಳಿದರು.

ಬೇರೆ ಕ್ಷೇತ್ರಗಳ ಉತ್ಪಾದಕರು ತಾವು ಉತ್ಪಾದಿಸುವ ಉತ್ಪನ್ನಗಳಿಗೆ ತಾವೇ ದರ ನಿಗದಿಮಾಡಿಕೊಳ್ಳುವರು. ಆದರೆ ರೈತರಿಗೆ ಮಾತ್ರ ಇದು ಸಾಧ್ಯವಾಗುತ್ತಿಲ್ಲ. ಬೇರೊಬ್ಬರು ದರ ನಿಗದಿ ಮಾಡುವರು. ಈ ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕೃಷಿ ಕ್ಷೇತ್ರ ಅವನತಿಯ ಹಾದಿ ಹಿಡಿಯುತ್ತದೆ
ಎಂದು ಹೇಳಿದರು.

ADVERTISEMENT

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ರಾಮಚಂದ್ರ ರೆಡ್ಡಿ, ನಾರಾಯಣಸ್ವಾಮಿ, ಶಾಂತಮೂರ್ತಿ, ಸೋಮಶೇಖರ್, ಶ್ರೀನಿವಾಸ್, ವೆಂಕಟರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.