ADVERTISEMENT

ಗಣರಾಜ್ಯೋತ್ಸವ: ಚಿಕ್ಕಬಳ್ಳಾಪುರದಲ್ಲಿ ಎಂಟಿಬಿ ನಾಗರಾಜ್ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 5:21 IST
Last Updated 26 ಜನವರಿ 2022, 5:21 IST
ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಧ್ವಜಾರೋಹಣ ನೆರವೇರಿಸಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಧ್ವಜಾರೋಹಣ ನೆರವೇರಿಸಿದರು.   

ಚಿಕ್ಕಬಳ್ಳಾಪುರ: ಇಲ್ಲಿನ‌ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ, ಡಾ.ಸಿ.ಎನ್.ಆರ್.ರಾವ್ ಜನಿಸಿದ ಜಿಲ್ಲೆ. ಇದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೈಗಾರಿಕಾ ಹಬ್ ನಿರ್ಮಿಸಲು ಸರ್ಕಾರ ಒಲವು ತೋರಿದೆ ಎಂದರು.

ADVERTISEMENT

ಜಿಲ್ಲೆಯಲ್ಲಿ ವೈದ್ಯಕೀಯ ಶಿಕ್ಷಣ ಕಾಲೇಜು ಆರಂಭದ ದಿನಗಳು ಹತ್ತಿರವಾಗಿವೆ. ಜಿಲ್ಲೆಯಲ್ಲಿ ಸಮಗ್ರ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್, ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.