ADVERTISEMENT

ರೈತರಿಗೆ ಪರಿಹಾರ ನೀಡಲು ಆಗ್ರಹ

ರೈತ ಸಂಘ, ಹಸಿರುಸೇನೆಯಿಂದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 3:53 IST
Last Updated 17 ಜೂನ್ 2021, 3:53 IST
ಬಾಗೇಪಲ್ಲಿ ತಾಲ್ಲೂಕು ಕಚೇರಿ ಮುಂದೆ ರೈತ ಸಂಘ, ಹಸಿರುಸೇನೆ ಮುಖಂಡರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು
ಬಾಗೇಪಲ್ಲಿ ತಾಲ್ಲೂಕು ಕಚೇರಿ ಮುಂದೆ ರೈತ ಸಂಘ, ಹಸಿರುಸೇನೆ ಮುಖಂಡರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು   

ಬಾಗೇಪಲ್ಲಿ: ರೈತರು ಬೆಳೆದ ಕೃಷಿ ಹಾಗೂ ತರಕಾರಿ ಬೆಳೆಗಳಿಗೆ ಸರ್ಕಾರ ವೈಜ್ಞಾನಿಕ ಬೆಂಬಲ ಬೆಲೆ ಹಾಗೂ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಮುಖಂಡರು ಬುಧವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟಿಸಿದರು.

ರಾಜ್ಯ ಹಸಿರು ಸೇನೆ ಸಂಚಾಲಕ ಲಕ್ಷ್ಮಣರೆಡ್ಡಿ ಮಾತನಾಡಿ, ಲಾಕ್‌ಡೌನ್ ಕಾರಣದಿಂದ ರೈತರು
ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಆಗದೇ ರೈತರಿಗೆ ಲಕ್ಷಾಂತರ ರುಪಾಯಿ ನಷ್ಟ ಆಗಿದೆ. ಒಂದಡೆ ಬೆಳೆಗಳಿಗೆ ಸರ್ಕಾರ ಅವೈಜ್ಞಾನಿಕ ರೀತಿಯಲ್ಲಿ ಬೆಂಬಲ ಬೆಲೆ ನಿಗದಿಪಡಿಸಿದೆ. ಇದರಿಂದ ರೈತರಿಗೆ ಅನುಕೂಲ ಆಗುವುದಿಲ್ಲ. ಸರ್ಕಾರ ತೋಟಗಾರಿಕೆ, ಕೃಷಿ ಇಲಾಖೆಗಳಿಂದ ಸಮೀಕ್ಷೆ ಮಾಡಿಸಬೇಕು. ತಾಲ್ಲೂಕಿನಲ್ಲಿ ಕೃಷಿ, ತರಕಾರಿ ಬೆಳೆ ನಷ್ಟ ಹೊಂದಿದ ರೈತರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿದರು.

ರೈತ ಸಂಘ ಹಾಗೂ ಹಸಿರುಸೇನೆ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಟಿ.ರಘುನಾಥರೆಡ್ಡಿ, ತಾಲ್ಲೂಕು ಉಪಾಧ್ಯಕ್ಷ ರಮಣ, ತಾಲ್ಲೂಕು ಮಹಿಳಾ ಸಂಚಾಲಕಿ ಟಿ.ಆರ್.ಪ್ರಮೀಳಾ, ಬಿ.ಎಂ.ಬಯ್ಯಾರೆಡ್ಡಿ, ಶ್ರೀನಿವಾಸ್, ನಾರಾಯಣಸ್ವಾಮಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.