ADVERTISEMENT

ಗ್ರಾಮ ವಾಸ್ತವ್ಯ: ಜರಬಂಡಹಳ್ಳಿಯಲ್ಲಿ ಸಚಿವ ಆರ್‌.ಅಶೋಕಗೆ ಅದ್ದೂರಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2022, 7:34 IST
Last Updated 26 ನವೆಂಬರ್ 2022, 7:34 IST
ಗ್ರಾಮ ವಾಸ್ತವ್ಯಕ್ಕೆ ಬಂದಿರುವ ಆರ್.ಅಶೋಕ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು.‌
ಗ್ರಾಮ ವಾಸ್ತವ್ಯಕ್ಕೆ ಬಂದಿರುವ ಆರ್.ಅಶೋಕ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು.‌   

ಚಿಕ್ಕಬಳ್ಳಾಪುರ: ಮಂಚೇನಹಳ್ಳಿ ತಾಲ್ಲೂಕಿನ ಜರಬಂಡಹಳ್ಳಿಯಲ್ಲಿ ಗ್ರಾಮ ವಾಸ್ತವ್ಯಕ್ಕೆ ಬಂದಿರುವ ಆರ್.ಅಶೋಕ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು.‌

ನುಲುಗುಮ್ಮನಹಳ್ಳಿ ಗ್ರಾಮದ ಆರಂಭದಿಂದ ಲಕ್ಷ್ಮಿ ವೆಂಕಟರಮಣಸ್ವಾಮಿ ದೇಗುಲದವರೆಗೆ ವಾಹನದಲ್ಲಿ ಮೆರವಣಿಯಲ್ಲಿ ಕರೆತರಲಾಯಿತು. ಕ್ರೇನ್ ಮೂಲಕ ಗ್ರಾಮಸ್ಥರು ಹೂವಿನ ಹಾರ ಹಾಕಿದರು. ವೆಂಕಟರಮಣ ಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಸಚಿವರು ಜನಬಂಡಹಳ್ಳಿಯತ್ತ ಸಾಗಿದರು.

ಗ್ರಾಮಕ್ಕೆ ಬಂದ ಸಚಿವರನ್ನು ಮಹಿಳೆಯರು ಪೂರ್ಣಕುಂಭದೊಂದಿಗೆ ಸ್ವಾಗತಿಸಿದರು. ವೀರಗಾಸೆ, ಡೊಳ್ಳುಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆ ಮೆರುಗು ತುಂಬಿದ್ದವು.

ADVERTISEMENT

ಸಚಿವರಾದ ಡಾ.ಕೆ.ಸುಧಾಕರ್ ಮತ್ತು ಎಂಟಿಬಿ ನಾಗರಾಜ್ ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ. ದಾರಿಯುದ್ದಕ್ಕೂ ಸಚಿವರ ಕಟೌಟ್ ಗಳು ರಾರಾಜಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.