ADVERTISEMENT

ಜ.19 ರಂದು ಸೀತಾರಾಮ ಕಲ್ಯಾಣೋತ್ಸವ

​ಪ್ರಜಾವಾಣಿ ವಾರ್ತೆ
Published 16 ಜನವರಿ 2020, 13:40 IST
Last Updated 16 ಜನವರಿ 2020, 13:40 IST

ಚಿಕ್ಕಬಳ್ಳಾಪುರ: ‘ಲೋಕ ಕಲ್ಯಾಣಾರ್ಥವಾಗಿ ಗಾಯತ್ರಿ ಸೇವಾ ಸಮಿತಿ, ಗಾಯತ್ರಿ ಮಹಿಳಾ ಮಂಡಳಿ ವತಿಯಿಂದ ಜನವರಿ 19 ರಂದು ನಗರದ ಶ್ರೀದೇವಿ ಪ್ಯಾಲೇಸ್‌ನಲ್ಲಿ ‘ಸೀತಾರಾಮ ಕಲ್ಯಾಣೋತ್ಸವ’ ಹಮ್ಮಿಕೊಳ್ಳಲಾಗಿದೆ ಎಂದು ಗಾಯತ್ರಿ ಸೇವಾ ಸಮಿತಿಯ ಅಧ್ಯಕ್ಷ ರಮೇಶ್ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜ.19 ರಂದು ಬೆಳಿಗ್ಗೆ 7.30 ಕ್ಕೆ ಗೋ ಪೂಜೆ, ಗುರು ಪ್ರಾರ್ಥನೆ, ವೇದ ಪಾರಾಯಣ, ಆಂಜನೇಯ ಸಹಸ್ರನಾಮ ತುಳಸಿ ಅರ್ಚನೆ, ಪವಮಾನ ಹೋಮ ನಡೆಯಲಿವೆ. ಮಧ್ಯಾಹ್ನ 12.30 ಕ್ಕೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ 5ಕ್ಕೆ ಮೃದಂಗ ವಿದ್ವಾಂಸ ಆನೂರು ಅನಂತಕೃಷ್ಣಶರ್ಮ, ಸಂಗೀತ ವಿದುಷಿ ಸುನಿತಾ, ಮಂಗಳಾ ರವಿ, ಸಂಗೀತ ವಿದ್ವಾನ್ ರಘುರಾಮ್ ತಂಡದ ಸಂಗೀತ ಕಛೇರಿ ನಡೆಯಲಿದೆ’ ಎಂದು ತಿಳಿಸಿದರು.

‘ಕಾರ್ಯಕ್ರಮದಲ್ಲಿ ಕೆಂಗೇರಿ ಓಕಾಂರ ಆಶ್ರಮದ ಮಧುಸೂದನಾನಂದಪುರಿ ಸ್ವಾಮಿ, ರಾಯಲ್ಪಾಡು ವಿದ್ವಾನ್ ವೆಲ್ಲಾಲ ಸತ್ಯನಾರಾಯಣ ಶಾಸ್ತ್ರಿ, ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರ ಟ್ರಸ್ಟ್ ಸಂಸ್ಥಾಪಕ ಪ್ರಭಾಕರ ಭಟ್, ಸಂಸದ ತೇಜಸ್ವಿ ಸೂರ್ಯ, ಶಾಸಕ ಡಾ.ಕೆ.ಸುಧಾಕರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ’ ಎಂದರು. ಗಾಯತ್ರಿ ಸೇವಾ ಸಮಿತಿಯ ಪದಾಧಿಕಾರಿಗಳಾದ ವಿಕ್ರಮ್, ಆದಿತ್ಯ, ಕಾರ್ತಿಕ್, ಮನೋಜ್ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.