ADVERTISEMENT

ರೈತ ಸಂಘಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2020, 5:21 IST
Last Updated 9 ನವೆಂಬರ್ 2020, 5:21 IST
ಚಿಕ್ಕಬಳ್ಳಾಪುರ ನಗರದ ರೈತ ಸಂಘದ ಕಚೇರಿಯಲ್ಲಿ ನೂತನ ಪದಾಧಿಕಾರಿಗಳಿಗೆ ಅಭಿನಂದಿಸಲಾಯಿತು
ಚಿಕ್ಕಬಳ್ಳಾಪುರ ನಗರದ ರೈತ ಸಂಘದ ಕಚೇರಿಯಲ್ಲಿ ನೂತನ ಪದಾಧಿಕಾರಿಗಳಿಗೆ ಅಭಿನಂದಿಸಲಾಯಿತು   

ಚಿಕ್ಕಬಳ್ಳಾಪುರ: ನಗರದಲ್ಲಿ ನಡೆದ ರೈತ ಸಂಘದ ಸಭೆಯಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ. ಲಕ್ಷ್ಮೀನಾರಾಯಣರೆಡ್ಡಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟರೊಣಪ್ಪ ಅವರು ರಾಜೀನಾಮೆ ನೀಡಿದ ಕಾರಣಕ್ಕೆ ಜಿ.ಎಂ. ವೆಂಕಟೇಶ್‌ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.

ಕಾರ್ಯದರ್ಶಿಯಾಗಿ ಗಂಗರಾಜು, ಪ್ರಧಾನ ಕಾರ್ಯದರ್ಶಿಯಾಗಿ ನಂದಿ ಶ್ರೀನಿವಾಸ್, ಗೌರವ ಅಧ್ಯಕ್ಷರಾಗಿ ವೆಂಕಟೇಶ್, ಕಾರ್ಯದರ್ಶಿಯಾಗಿ ವೆಂಕಟೇಶ್, ಖಜಾಂಚಿಯಾಗಿ ಎಸ್.ವಿ. ಶ್ರೀನಿವಾಸ, ಸಹಕಾರ್ಯದರ್ಶಿಯಾಗಿ ಕೆಂಪರೆಡ್ಡಿ, ತಾಲ್ಲೂಕು ಸಂಚಾಲಕರಾಗಿ ಮಂಜುನಾಥ, ರವಿ ಹಾಗೂ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಬಿ.ಎಂ. ವಾಣಿ, ಯುವ ಘಟಕದ ಅಧ್ಯಕ್ಷರಾಗಿ ಎಸ್‍.ಎಂ. ವೆಂಟಕೇಶ್, ಶಿಸ್ತು ಸಮಿತಿ ಅಧ್ಯಕ್ಷರಾಗಿ ನಾರಾಯಣಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಶಿವಕುಮಾರ್, ಬಾಲಕೃಷ್ಣ, ವೆಂಕಟೇಶ ಅವರನ್ನು ಆಯ್ಕೆ ಮಾಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.