ADVERTISEMENT

ಗೌರಿಬಿದನೂರು: ಸರಣಿ ಅಪಘಾತ- ಒಬ್ಬನ ಸಾವು

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 8:17 IST
Last Updated 6 ಸೆಪ್ಟೆಂಬರ್ 2021, 8:17 IST

ಗೌರಿಬಿದನೂರು: ತಾಲ್ಲೂಕಿನ ವಿವಿಧೆಡೆ ಭಾನುವಾರ ಸಂಜೆ ಸರಣಿ ಅಪಘಾತ ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.

ಕುರುಬರಹಳ್ಳಿ ಗೇಟ್ ಬಳಿ ಎರಡು ದ್ವಿಚಕ್ರವಾಹನಗಳ ಸವಾರರು ಮುಖಾಮುಖಿ ಡಿಕ್ಕಿ ಹೊಡೆದಿರುವ ಪರಿಣಾಮ ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.

ನಗರ ಹೊರವಲಯದ ಕಲ್ಲೂಡಿ ಗ್ರಾಮದ ಬಳಿ ಬೆಂಗಳೂರು- ಹಿಂದೂಪುರ ರಸ್ತೆಯ ಮಧ್ಯೆಭಾಗದಲ್ಲಿನ ವಿಭಜಕಕ್ಕೆ ದ್ವಿಚಕ್ರವಾಹನ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ADVERTISEMENT

ಗುಂಡಾಪುರ ಹೊರವಲಯದಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಇದರಿಂದಾಗಿ ವಾಹನ ಸವಾರರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಒಟ್ಟಾರೆ ನಗರ ಸಮೀಪದಲ್ಲಿಯೇ ವಿವಿಧ ಸ್ಥಳಗಳಲ್ಲಿ ಸರಳಿ ಅಪಘಾತಗಳು ಸಂಭವಿಸಿದ್ದು ಗಾಯಾಳುಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.