ADVERTISEMENT

ಕಾಂಗ್ರೆಸ್‌ನಿಂದ ದಲಿತರು, ಹಿಂದುಳಿದವರ ಅವಮಾನ: ಸುಧಾಕರ್

ವಿರೋಧ ಪಕ್ಷಗಳ ವಿರುದ್ಧ ಸುಧಾಕರ್ ಆರೋಪ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 7:22 IST
Last Updated 13 ಡಿಸೆಂಬರ್ 2020, 7:22 IST
ಡಾ.ಕೆ.ಸುಧಾಕರ್‌
ಡಾ.ಕೆ.ಸುಧಾಕರ್‌   

ಚಿಕ್ಕಬಳ್ಳಾಪುರ: ‘ಎಷ್ಟೋ ದಲಿತರು ಸಸ್ಯಾಹಾರಿಗಳಾಗಿದ್ದಾರೆ. ಆದರೂ ಕಾಂಗ್ರೆಸ್‌ನವರು ದಲಿತರು, ಹಿಂದುಳಿದವರು ಗೋಮಾಂಸ ಸೇವಿಸುತ್ತಾರೆ ಎಂದು ಅಪಹಾಸ್ಯ ಮಾಡುವ ಮೂಲಕ ಅವಮಾನ ಮಾಡುತ್ತಿದ್ದಾರೆ’ ಎಂದು ಆರೋಗ್ಯ ಮತ್ತ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿರೋಧ ಪಕ್ಷಗಳು ದಲಿತರು, ಹಿಂದುಳಿದವರಿಗೆ ಗೋಮಾಂಸ ತಿನ್ನುವವರು ಎನ್ನುವ ಹಣೆಪಟ್ಟಿ ಕಟ್ಟುವುದು ಬೇಡ. ಈ ರೀತಿ ಮಾಡಿಯೇ ಹಿಂದೂಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ’ ಎಂದು ಆರೋಪಿಸಿದರು.

‘ನಮ್ಮ ದೇಶದಲ್ಲಿ ನಾವೆಲ್ಲ ಗೋವುಗಳಿಗೆ ಕುಟುಂಬದ ಸದಸ್ಯರ ಸ್ಥಾನಮಾನ ನೀಡಿದ್ದೇವೆ. ಈ ಸಂಸ್ಕಾರ, ಪರಂಪರೆ ನಮ್ಮಲ್ಲಿ ಸಾವಿರಾರು ವರ್ಷಗಳಿಂದ ಇದೆ. ಹಾಗಾಗಿ ಬಿಜೆಪಿಯ ಆಶಯ ಮತ್ತು ಸಿದ್ಧಾಂತ ಗೋವಿನ ಪರವಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.