ADVERTISEMENT

ಚಿಕ್ಕಬಳ್ಳಾಪುರ | ಕಾನ್‌ಸ್ಟೆಬಲ್‌ಗೆ ಹೂಮಳೆಗರೆದು ವಿಶೇಷ ಸ್ವಾಗತ

ಕೋವಿಡ್‌ 19ಗೆ ತುತ್ತಾಗಿ ಚಿಕಿತ್ಸೆಯಿಂದ ಗುಣಮುಖವಾಗಿ ಕರ್ತವ್ಯಕ್ಕೆ ವಾಪಸ್

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 11:21 IST
Last Updated 15 ಜೂನ್ 2020, 11:21 IST
ಎಸ್ಪಿ ಕಚೇರಿ ಪ್ರವೇಶದ್ವಾರದಲ್ಲಿ ಚಂದ್ರಶೇಖರ್ ಅವರಿಗೆ ಮಹಿಳಾ ಸಿಬ್ಬಂದಿ ಹೂವುಗಳನ್ನು ಎರಚಿ ಸ್ವಾಗತಿಸಿದರು.
ಎಸ್ಪಿ ಕಚೇರಿ ಪ್ರವೇಶದ್ವಾರದಲ್ಲಿ ಚಂದ್ರಶೇಖರ್ ಅವರಿಗೆ ಮಹಿಳಾ ಸಿಬ್ಬಂದಿ ಹೂವುಗಳನ್ನು ಎರಚಿ ಸ್ವಾಗತಿಸಿದರು.   

ಚಿಕ್ಕಬಳ್ಳಾಪುರ: ಕೋವಿಡ್–19ಗೆ ತುತ್ತಾಗಿ ಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾಗಿ ಸೋಮವಾರ ಕರ್ತವ್ಯಕ್ಕೆ ವಾಪಾಸಾದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯ ವೈರ್‌ಲೆಸ್‌ ವಿಭಾಗದ ಹೆಡ್‌ ಕಾನ್‌ಸ್ಟೆಬಲ್ ಚಂದ್ರಶೇಖರ್ ಅವರಿಗೆ ಎಸ್ಪಿ ಕಚೇರಿಯಲ್ಲಿ ವಿಶೇಷ ಸ್ವಾಗತ ನೀಡಲಾಯಿತು.

ಸೋಮವಾರ ಕರ್ತವ್ಯಕ್ಕೆ ಮರಳಿದ ಚಂದ್ರಶೇಖರ್ ಅವರನ್ನು ಕೇದ್ರ ವಲಯ ಐಜಿಪಿ ಕೆ.ವಿ.ಶರತ್‌ಚಂದ್ರ ಮತ್ತು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಅವರು ಶಾಲು ಹೊದೆಸಿ, ಫಲಪುಷ್ಪ ನೀಡಿ ಸ್ವಾಗತಿಸುವ ಮೂಲಕ ಆರೋಗ್ಯದ ಬಗ್ಗೆ ವಿಚಾರಿಸಿ, ಆತ್ಮಸ್ಥೈರ್ಯ ತುಂಬಿದರು.

ಚಂದ್ರಶೇಖರ್ ಅವರು ಎಸ್ಪಿ ಕಚೇರಿ ಪ್ರವೇಶದ ವೇಳೆ ಪ್ರವೇಶದ್ವಾರದಲ್ಲಿ ಮಹಿಳಾ ಸಿಬ್ಬಂದಿ ಅವರ ಮೇಲೆ ಹೂವುಗಳನ್ನು ಎರಚಿ ಸ್ವಾಗತಿಸಿದ್ದು ವಿಶೇಷವಾಗಿತ್ತು.

ADVERTISEMENT

ಮೇ ತಿಂಗಳಲ್ಲಿ ರಜೆಯ ಮೇಲೆ ಕೆಲ ದಿನ ತುಮಕೂರಿಗೆ ಹೋಗಿ ವಾಪಾಸಾಗಿದ್ದ ಚಂದ್ರಶೇಖರ್ ಅವರಿಗೆ ಕೋವಿಡ್ ತಗುಲಿರುವುದು ಮೇ 29 ರಂದು ಪತ್ತೆಯಾಗಿತ್ತು. ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಾನ್‌ಸ್ಟೆಬಲ್‌ ಒಬ್ಬರಿಗೆ ಕೋವಿಡ್ ತಗುಲಿದ್ದು ಕೇಳಿ ಪೊಲೀಸ್ ಇಲಾಖೆ ಬೆಚ್ಚಿತ್ತು.

ಸೋಂಕಿತ ಕಾನ್‌ಸ್ಟೆಬಲ್‌ ಪ್ರಾಥಮಿಕ ಸಂಪರ್ಕಕ್ಕೆ ಬಂದ ಸಹದ್ಯೋಗಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಜತೆಗೆ, ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿರುವ ಪೊಲೀಸ್ ವಸತಿ ಸಂಕಿರ್ಣಗಳ ಪೈಕಿ ಎರಡು ಸಂಕೀರ್ಣಗಳನ್ನು ಸೀಲ್‌ಡೌನ್‌ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.