ಶಿಡ್ಲಘಟ್ಟ: ತಾಲ್ಲೂಕಿನಲ್ಲಿ ಕರಾಟೆ ಕಲೆಯನ್ನು ಬೆಳೆಸುವ ಸಲುವಾಗಿ ಮತ್ತು ಪ್ರತಿಭಾವಂತ ಕರಾಟೆ ಪಟುಗಳಿಗೆ ಅವಕಾಶ ಕಲ್ಪಿಸಲು ಜ. 10ರಂದು ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಡೆಸಲಾಗುತ್ತಿದೆ ಎಂದು ದಿವ್ಯ ಭಾರತ್ ಕರಾಟೆ ಡೋ ಅಸೋಸಿಯೇಷನ್ನ ಕರಾಟೆ ಶಿಕ್ಷಕ ಅರುಣ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪ್ರತಿಕಾ ಹೇಳಿಕೆ ನೀಡಿರುವ ಅವರು, ಶಿಡ್ಲಘಟ್ಟ ನಗರದ ಒಂದನೇ ನಗರ್ತ ಪೇಟೆಯ ಶ್ರೀಕಾಳಿಕಾಂಬ ಕಮ್ಮಟೇಶ್ವರಸ್ವಾಮಿ ಸಮುದಾಯ ಭವನದಲ್ಲಿ 2020-21 ನೇ ಸಾಲಿನ ಕರಾಟೆ ಚಾಂಪಿಯನ್ಶಿಪ್ ನಡೆಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ಮೊದಲು ಕರಾಟೆಪಟುಗಳ ತಾಲೀಮು ನಡೆಸಿ, ನಂತರ ವಿವಿಧ ಸ್ಪರ್ಧೆಗಳನ್ನು ನಡೆಸಲಾಗುವುದು. ಸಂಜೆ ವೇಳೆಗೆ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.