ಬಾಗೇಪಲ್ಲಿ: ತಾಲ್ಲೂಕಿನ ಪಾತಪಾಳ್ಯ ಹೋಬಳಿಯ ದೇವರಾಜಪಲ್ಲಿ ಗ್ರಾಮದಲ್ಲಿ ಬುಧವಾರ ಬೀದಿ ನಾಯಿಗಳು ಕುರಿಗಳ ಮೇಲೆ ದಾಳಿ ನಡೆಸಿದ್ದರಿಂದ 15 ಕುರಿಗಳು ಮೃತಪಟ್ಟಿವೆ.
ದೇವರಾಜಪಲ್ಲಿ ಗ್ರಾಮದ ರೈತ ಕೋಟಪ್ಪಗಾರಿ ರಾಮಚಂದ್ರ 30ಕ್ಕೂ ಹೆಚ್ಚು ಕುರಿ ಸಾಕಿದ್ದಾರೆ. ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ನಾಯಿಗಳು ದಾಳಿ ಮಾಡಿದೆ.
ಬೀದಿನಾಯಿಗಳು ಕುರಿಗಳ ಮೇಲೆ ದಾಳಿ ಮಾಡಿದೆ. ಸರ್ಕಾರ ಕೂಡಲೇ ಪರಿಹಾರ ಕಲ್ಪಿಸಬೇಕು ಎಂದು ರೈತ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.