ADVERTISEMENT

ಗೌರಿಬಿದನೂರು: ಗೃಹಿಣಿ ನೇಣಿಗೆ ಶರಣು

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 2:50 IST
Last Updated 14 ಫೆಬ್ರುವರಿ 2021, 2:50 IST

ಗೌರಿಬಿದನೂರು: ಜೀವನದಲ್ಲಿ ಜಿಗುಪ್ಸೆಗೊಂಡ ಗೃಹಿಣಿ ನೇಣಿಗೆ ಶರಣಾದ ಘಟನೆ ತಾಲ್ಲೂಕಿನ ಕುರೂಡಿ ಗ್ರಾಮದಲ್ಲಿ
ನಡೆದಿದೆ.

ಪುಷ್ಪಲತಾ (29) ಆತ್ಮಹತ್ಯೆ ಮಾಡಿಕೊಂಡವರು.

ಅನಾರೋಗ್ಯ ಹಾಗೂ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

ಮೂಲತಃ ಮಧುಗಿರಿ ತಾಲ್ಲೂಕಿನ ದಾಳವಾಟ ಗ್ರಾಮದ ನಿವಾಸಿಯಾದ ಪುಷ್ಪಲತಾ ಕಳೆದ ಹತ್ತು ವರ್ಷಗಳ ಹಿಂದೆ ಕುರೂಡಿ ಗ್ರಾಮದ ಕೃಷ್ಣಮೂರ್ತಿ ಎಂಬುವರ ಜೊತೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಂದು ಗಂಡು ಮಗುವಿದೆ.‌

ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆಯ ಪಿಎಸ್ಐ ಮೋಹನ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.