ADVERTISEMENT

ಸ್ವಚ್ಛ ನಗರ ನಿರ್ಮಾಣಕ್ಕೆ ಸಹಕರಿಸಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2021, 3:48 IST
Last Updated 7 ಮಾರ್ಚ್ 2021, 3:48 IST
ಶಿಡ್ಲಘಟ್ಟ ತಾಲ್ಲೂಕಿನ ಹಿತ್ತಲಹಳ್ಳಿ ಗೇಟ್ ಬಳಿ ಇರುವ ನಗರಸಭೆಯ ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ್ದ 11ನೇ ವಾರ್ಡಿನ ಮಹಿಳೆಯರಿಗೆ ನಗರಸಭೆ ಪೌರಾಯುಕ್ತ ಶ್ರೀನಿವಾಸ್ ಕಸ ವಿಲೇವಾರಿ ಕುರಿತು ಮಾಹಿತಿ ನೀಡಿದರು
ಶಿಡ್ಲಘಟ್ಟ ತಾಲ್ಲೂಕಿನ ಹಿತ್ತಲಹಳ್ಳಿ ಗೇಟ್ ಬಳಿ ಇರುವ ನಗರಸಭೆಯ ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ್ದ 11ನೇ ವಾರ್ಡಿನ ಮಹಿಳೆಯರಿಗೆ ನಗರಸಭೆ ಪೌರಾಯುಕ್ತ ಶ್ರೀನಿವಾಸ್ ಕಸ ವಿಲೇವಾರಿ ಕುರಿತು ಮಾಹಿತಿ ನೀಡಿದರು   

ಶಿಡ್ಲಘಟ್ಟ: ನಗರದ ಹನ್ನೊಂದನೇ ವಾರ್ಡ್‌ ಅನ್ನು ಪೈಲಟ್ ವಾರ್ಡ್ ಆಗಿ ಆರಿಸಿಕೊಂಡಿದ್ದು, ತ್ಯಾಜ್ಯ ವಿಲೇವಾರಿಯಿಂದ ಪ್ರಾರಂಭಗೊಂಡಂತೆ ಪ್ರತಿಯೊಂದು ರೀತಿಯಲ್ಲೂ ಮಾದರಿಯಾಗಿರುವಂತೆ ರೂಪಿಸಲಾಗುವುದು. ಸಾರ್ವಜನಿಕರು ನಗರಸಭೆಯವರೊಂದಿಗೆ ಸಹಕರಿಸುವ ಮೂಲಕ ನಗರವನ್ನು ಸುಂದರವಾಗಿಸಲು ನೆರವಾಗಬೇಕು ಎಂದು ನಗರಸಭೆ ಪೌರಾಯುಕ್ತ ಶ್ರೀನಿವಾಸ್ ತಿಳಿಸಿದರು.

ತಾಲ್ಲೂಕಿನ ಹಿತ್ತಲಹಳ್ಳಿ ಗೇಟ್ ಬಳಿ ಇರುವ ನಗರಸಭೆಯ ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ್ದ 11ನೇ ವಾರ್ಡಿನ ಮಹಿಳೆಯರಿಗೆ ಕಸ ವಿಲೇವಾರಿ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು.

ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡಲು ಪೌರ ಕಾರ್ಮಿಕರಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ನಿಮ್ಮ ಮನೆ ಅಥವಾ ಅಂಗಡಿಗಳ ತ್ಯಾಜ್ಯವನ್ನು ರಸ್ತೆಯಲ್ಲಿ ಸುರಿಯಬಾರದು. ಅಡುಗೆ ಮನೆಯಲ್ಲಿ ಒಣ ಮತ್ತು ಹಸಿ ತ್ಯಾಜ್ಯಗಳಿಗೆ ಪ್ರತ್ಯೇಕ ಬಿನ್‌ಗಳನ್ನು ಇರಿಸಿಕೊಳ್ಳಬೇಕು ಎಂದರು.

ADVERTISEMENT

ವ್ಯವಸ್ಥಾಪಕ ಸತ್ಯನಾರಾಯಣ್ ಮಾತನಾಡಿ, ಮನೆಗಳಲ್ಲಿ ಕಸ ವಿಂಗಡಣೆ ತುಂಬಾ ಸುಲಭ. ಮೊದ ಮೊದಲು ಸ್ವಲ್ಪ ಕಷ್ಟ ಎನಿಸಬಹುದು. ನೀವು ಮೊದಲ ಒಂದು ತಿಂಗಳು ಸ್ವಲ್ಪ ಪ್ರಯತ್ನ ಹಾಕಿದರೆ, ನಂತರ ಅದು ನಿಮಗೆ ಒಂದು ಅಭ್ಯಾಸವಾಗಿಬಿಡುತ್ತದೆ. ಇದು ನಮ್ಮ ಊರನ್ನು ಉಳಿಸುವ ಒಂದು ಒಳ್ಳೆಯ ಅಭ್ಯಾಸ ಎಂದರು.

ನಗರಸಭೆ ಸದಸ್ಯ ಎಲ್. ಅನಿಲ್ ಕುಮಾರ್ ಮಾತನಾಡಿ, ಸಾರ್ವಜನಿಕರೆಲ್ಲರೂ ಸಹಕಾರ ನೀಡಿದಾಗ ಮಾತ್ರ ನಗರವನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಸಾಧ್ಯವಿದೆ ಎಂದು ಹೇಳಿದರು.

ನಗರಸಭೆ ಆರೋಗ್ಯ ನಿರೀಕ್ಷಕಿ ಶೋಭಾ ಅವರು ಮಹಿಳೆಯರಿಗೆ ತ್ಯಾಜ್ಯ ವಿಲೇವಾರಿ ಘಟಕದ ಕಾರ್ಯ ನಿರ್ವಹಣೆ ಬಗ್ಗೆ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.