ADVERTISEMENT

ಕಾಲುವೆಯಲ್ಲಿ ಪತ್ತೆಯಾದ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2021, 2:20 IST
Last Updated 26 ನವೆಂಬರ್ 2021, 2:20 IST

ಚಿಕ್ಕಬಳ್ಳಾಪುರ: ಅಗಲಗುರ್ಕಿ ಗ್ರಾಮ ಹೊರವಲಯದ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯ ಕಾಲುವೆಯಲ್ಲಿ
ದೊರೆತ ಅಪರಿಚಿತ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಾಲುವೆಯಲ್ಲಿ ಬಿದಿದ್ದ ಅವರನ್ನು ಗ್ರಾಮಾಂತರ ಠಾಣೆ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು.

ಸುಮಾರು 40 ವರ್ಷದ ಅವರು 168 ಸೆ.ಮೀ ಎತ್ತರ ಇದ್ದಾರೆ. ಗೋದಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾರೆ.

‌ಕಾಫಿ ಬಣ್ಣದ ಬನಿಯನ್, ಸಿಮೆಂಟ್ ಬಣ್ಣದ ನಿಕ್ಕರ್ ಧರಿಸಿದ್ದರು. ವಾರಸುದಾರರು ಇದ್ದಲ್ಲಿ ಚಿಕ್ಕಬಳ್ಳಾಪುರ ಎಸ್‌ಪಿ ಕಚೇರಿ 08156-275400 ಸಂಪರ್ಕಿಸಬಹುದು ಎಂದು ಡಿವೈಎಸ್‌ಪಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.