ADVERTISEMENT

ದೇವಾಲಯ ಜೀರ್ಣೋದ್ಧಾರ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2021, 4:19 IST
Last Updated 12 ನವೆಂಬರ್ 2021, 4:19 IST
ಶಿಡ್ಲಘಟ್ಟ ತಾಲ್ಲೂಕಿನ ಕಾಳನಾಯಕನಹಳ್ಳಿಯಲ್ಲಿ ಶ್ರೀಬಸವೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಗೋ ಪೂಜೆ ನೆರವೇರಿಸಲಾಯಿತು
ಶಿಡ್ಲಘಟ್ಟ ತಾಲ್ಲೂಕಿನ ಕಾಳನಾಯಕನಹಳ್ಳಿಯಲ್ಲಿ ಶ್ರೀಬಸವೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಗೋ ಪೂಜೆ ನೆರವೇರಿಸಲಾಯಿತು   

ಶಿಡ್ಲಘಟ್ಟ: ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಕಾಳನಾಯಕನಹಳ್ಳಿಯಲ್ಲಿ ಶ್ರೀಬಸವೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು ಗ್ರಾಮಸ್ಥರು ಹಾಗೂ ಕುಲ ಬಾಂಧವರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ನೂರಾರು ಭಕ್ತರು ಸ್ವಾಮಿಯ ಕೈಂಕರ್ಯದಲ್ಲಿ ಭಾಗವಹಿಸಿ ದರ್ಶನ ಪಡೆದು ಪುನೀತರಾದರು. ಕಾಳನಾಯಕನಹಳ್ಳಿಯಲ್ಲಿ ಮಹಾಗಣಪತಿ, ನಂದೀಶ್ವರ, ಪ್ರಸನ್ನ ಪಾರ್ವತಾಂಬ ಸಮೇತ ಶ್ರೀಬಸವೇಶ್ವರ ಸ್ವಾಮಿಯ ದೇವಾಲಯ ಪಾಳು ಬಿದ್ದಿತ್ತು. ಗ್ರಾಮಸ್ಥರು, ಕುಲ ಬಾಂಧವರು ಹಾಗೂ ಭಕ್ತರ ನೆರವಿನಿಂದ ಜೀರ್ಣೋದ್ಧಾರಗೊಳಿಸಲಾಗಿದೆ. ದೇವಾಲಯದಲ್ಲಿ ಗುರುವಾರ ನಾನಾ ಪೂಜೆ, ಹೋಮ, ಹವನ ಹಮ್ಮಿಕೊಳ್ಳಲಾಗಿತ್ತು.

ಸ್ವಾಮಿಯ ಮೂರ್ತಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ಮಹಾಮಂಗಳಾರತಿ ಮಾಡಿ ಪೂಜೆ ನೆರವೇರಿಸಲಾಯಿತು. ಎಲ್ಲ ಭಕ್ತರಿಗೂ ಅನ್ನ ಸಂತರ್ಪಣೆ ನೆರವೇರಿಸಲಾಯಿತು. ವಿಶೇಷವಾಗಿ ಗೋ ಪೂಜೆ ನೆರವೇರಿಸಿ ವಸ್ತ್ರಬಳೆ, ಅರಿಸಿನ ಕುಂಕುಮ ದಾನವನ್ನು ಮಾಡಲಾಯಿತು.

ADVERTISEMENT

ಮಾಜಿ ಸಂಸದ ಕೆ.ಎಚ್. ಮುನಿಯಪ್ಪ, ಕೋಚಿಮುಲ್ ನಿರ್ದೇಶಕ ಆರ್. ಶ್ರೀನಿವಾಸ್, ಪುಟ್ಟು ಆಂಜಿನಪ್ಪ, ಕೆ. ಗುಡಿಯಪ್ಪ, ಡಾ.ರಮೇಶ್, ಯಲುವಳ್ಳಿ ರಮೇಶ್ ಭೇಟಿ ಕೊಟ್ಟಿದ್ದರು. ದೇವಾಲಯ ನಿರ್ಮಾಣ ಸಮಿತಿಯ ಮುಖ್ಯಸ್ಥರಾದ ಭೀಮೇಶ್, ಶ್ರೀರಾಮಪ್ಪ, ಮಂಜಯ್ಯ, ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.