ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲ್ಲೂಕಿನ ಹೊಸಹುಡ್ಯ ಗ್ರಾಮದಲ್ಲಿ ಮಂಗಳವಾರ ರಾತ್ರಿ ಬೋರ್ವೆಲ್ ಪೈಪ್ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಹೊರರಾಜ್ಯಗಳ ಮೂರು ಕಾರ್ಮಿಕರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೊಸಹುಡ್ಯ ಗ್ರಾಮದ ರೈತ ಬೈರಾರೆಡ್ಡಿ ಅವರ ಜಮೀನಿನಲ್ಲಿ ಕೊಳವೆಬಾವಿ ಕೊರೆಯಲು ಹೋಗುತ್ತಿದ್ದ ವೇಳೆ ಕಿರಿದಾದ ಮಣ್ಣಿನ ದಾರಿಯಲ್ಲಿ ಆಯತಪ್ಪಿ ಲಾರಿ ಮಗುಚಿದೆ.
ಘಟನೆಯಲ್ಲಿ ಮಹಾರಾಷ್ಟ್ರ ಮೂಲದ ಇಬ್ಬರು, ಛತ್ತಿಸಗಡದ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.