ADVERTISEMENT

ನಂದಿ ನಾಡಕಚೇರಿಗೆ ಕನ್ನ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 4:30 IST
Last Updated 22 ಸೆಪ್ಟೆಂಬರ್ 2022, 4:30 IST
ನಂದಿ ಗ್ರಾಮದ ನಾಡಕಚೇರಿಯಲ್ಲಿ ಕಳ್ಳರು ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿರುವುದು
ನಂದಿ ಗ್ರಾಮದ ನಾಡಕಚೇರಿಯಲ್ಲಿ ಕಳ್ಳರು ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿರುವುದು   

ನಂದಿ (ಚಿಕ್ಕಬಳ್ಳಾಪುರ): ತಾಲ್ಲೂಕಿನ ನಂದಿ ಗ್ರಾಮದ ನಾಡಕಚೇರಿಯಲ್ಲಿ ಮಂಗಳವಾರ ರಾತ್ರಿ ಕಳ್ಳತನ ನಡೆದಿದೆ. ಕಚೇರಿಯ ಬಾಗಿಲು ಮುರಿದಿರುವ ಕಳ್ಳರು, 2 ಲ್ಯಾಪ್‌ಟಾಪ್, 2 ಕಂಪ್ಯೂಟರ್, ಬಯೊಮೆಟ್ರಿಕ್ ಹಾಗೂ ಇವುಗಳಿಗೆ ಸಂಬಂಧಿಸಿದ ಬಿಡಿ ಭಾಗಗಳನ್ನು ಕಳ್ಳತನ ಮಾಡಿದ್ದಾರೆ.

ಇವುಗಳ ಒಟ್ಟು ಮೌಲ್ಯ ₹ 60 ಸಾವಿರ ಎಂದು ಅಂದಾಜಿಸಲಾಗಿದೆ.

ಇದೇ ದಿನ ನಂದಿಯ ಸರ್ಕಾರಿ ಪ್ರಾಥಮಿಕ ಶಾಲೆ ಕಚೇರಿಯ ಬಾಗಿಲು ಮುರಿದು ಎರಡು ಬ್ಯಾಟರಿಗಳನ್ನು ಸಹ ಕಳ್ಳತನ ಮಾಡಿದ್ದಾರೆ.ಈ ಸಂಬಂಧ ಉಪತಹಶೀಲ್ದಾರ್ ಎನ್.ಯಶೋದಮ್ಮ ನಂದಿ ಗಿರಿಧಾಮ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ADVERTISEMENT

ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ಸಿಬ್ಬಂದಿಯೊಂದಿಗೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.